News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಪುನೀತ್‌ ಪರ್ವʼ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಮಂತ್ರಣ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಕನಸಿನ ಕೂಸಾಗಿದ್ದ ʼಗಂಧದ ಗುಡಿʼ ಸಾಕ್ಷ್ಯಚಿತ್ರದ ಬಿಡುಗಡೆಯ ಪೂರ್ವಭಾವಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಡಾ.ರಾಜ್‌ ಕುಮಾರ್‌ ಕುಟುಂಬ ಆಹ್ವಾನ ನೀಡಿದೆ.

ಈಗಾಗಲೇ ಟ್ರೇಲರ್‌ ಸಹ ಬಿಡುಗಡೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇದನ್ನು ಮೆಚ್ಚಿಕೊಂಡಿದ್ದಾರೆ. ಇದೀಗ ಈ ಸಾಕ್ಷ್ಯಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಅ. 21ರಂದು ದೊಡ್ಡ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ರಾಜ್‌ ಕುಟುಂಬ ಆಯೋಜಿಸಿದೆ. ಈ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲು ರಾಜ್‌ ಕುಟುಂಬ ಭೇಟಿಯಾಗಿದೆ. ಈ ಸಂದರ್ಭದಲ್ಲಿ ಪುನೀತ್‌ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್‌ ಮತ್ತವರ ಪುತ್ರ ಯುವ ರಾಜ್‌ಕುಮಾರ್‌ ಈ ಸಂದರ್ಭದಲ್ಲಿದ್ದರು.

ವಿಶೇಷವಾದ ರೀತಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದ್ದು, ಕಟ್ಟಿಗೆಯಿಂದ ಮಾಡಿದ ಪೆಟ್ಟಿಗೆಯಲ್ಲಿ ಪುನೀತ್‌ ಅವರ ಕಿರು ಪ್ರತಿಮೆಯನ್ನು ಇರಿಸಲಾಗಿದೆ. ಗಂಧದ ಕಟ್ಟಿಗೆಯ ತುಂಡಿನ ಮೇಲೆ ಅಪ್ಪು ಅವರ ಹಸ್ತಾಕ್ಷರವೂ ಇದೆ.

“ಪುನೀತ್‌ ಪರ್ವ” ಎಂಬ ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅಮಿತಾಬ್‌ ಬಚ್ಚನ್‌ ಮತ್ತು ರಜನಿಕಾಂತ್‌ ಭಾಗವಹಿಸುವ ಸಾಧ್ಯತೆ ಇದೆ.

ಸದ್ಯ ಬಿಡುಗಡೆ ಆಗಿರುವ ಟ್ರೇಲರ್‌ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಲ್ಲದೆ, ಕೋಟ್ಯಂತರ ವೀಕ್ಷಣೆ ಪಡೆದುಕೊಂಡಿದೆ. ಪಿಆರ್‌ಕೆ ಸಂಸ್ಥೆಯಡಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ “ಗಂಧದಗುಡಿ” ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top