News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೇಡನ್ ಸಂಸ್ಥೆಯ ಕೆಮ್ಮಿನ ಸಿರಪ್‌ ಉತ್ಪಾದನೆ ನಿಲ್ಲಿಸಿದ ಹರಿಯಾಣ

ನವದೆಹಲಿ: ಭಾರತ ನಿರ್ಮಿತ ನಾಲ್ಕು ಕೆಮ್ಮು ಮತ್ತು ಶೀತದ ಸಿರಪ್‌ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದ ನಂತರ, ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನ ಕೆಮ್ಮು ಸಿರಪ್‌ಗಳ ಉತ್ಪಾದನೆಯನ್ನು ಹರಿಯಾಣ ಸರ್ಕಾರ ನಿಲ್ಲಿಸಿದೆ.

ಈ ಕಂಪನಿಯ ನಾಲ್ಕು ಕೆಮ್ಮು ಮತ್ತು ಶೀತದ ಸಿರಪ್‌ಗಳು ಗ್ಯಾಂಬಿಯಾದಲ್ಲಿ 66 ಮಕ್ಕಳು ಸಾವಿಗೆ ಸಂಬಂಧಿಸಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.

ಹರಿಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಅವರು ಈ ಬಗ್ಗೆ ಮಾತನಾಡಿ, “ಕೇಂದ್ರ ಮತ್ತು ಹರಿಯಾಣ ರಾಜ್ಯ ಔಷಧ ಇಲಾಖೆಗಳು ಜಂಟಿ ತಪಾಸಣೆ ನಡೆಸಿದ ನಂತರ, ಸುಮಾರು 12 ನ್ಯೂನತೆಗಳು ಕಂಡುಬಂದಿವೆ, ಇದನ್ನು ಗಮನದಲ್ಲಿಟ್ಟುಕೊಂಡು, ಒಟ್ಟು ಉತ್ಪಾದನೆಯನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಮತ್ತು ಈ ಬಗ್ಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ.

ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಕೆಮ್ಮು ಸಿರಪ್‌ಗಳ ಉತ್ಪಾದನೆಯನ್ನು  ಸರ್ಕಾರ ನಿಲ್ಲಿಸಿದೆ  ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top