News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರಿಗೆ ಟಿಪ್ಪುವಿನ ಕೊಡುಗೆ ಏನು ಇಲ್ಲ: ಪ್ರತಾಪ್‌ ಸಿಂಹ

ಮೈಸೂರು:  ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ನಾನು ಉದ್ದೇಶ ಪೂರ್ವಕವಾಗಿ ಬದಲಾಯಿಸಿದ್ದೇನೆ ಎಂಬುದಾಗಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಹೇಳಿಕೊಂಡಿದ್ದಾರೆ.

ಹೆಸರು ಬದಲಾವಣೆಯಾದ ನಂತರ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಉದ್ದೇಶಪೂರ್ವಕವಾಗಿಯೇ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ಮಾಡಿದ್ದೇನೆ. ಮೈಸೂರಿಗೆ ಟಿಪ್ಪುವಿನ ಕೊಡುಗೆ ಏನು?” ಎಂದು ಪ್ರಶ್ನಿಸಿದ್ದಾರೆ.

“ಟಿಪ್ಪುವಿಗೂ ಮೈಸೂರಿಗೂ ಸಂಬಂಧವೇ ಇಲ್ಲ ಟಿಪ್ಪು ಶ್ರೀರಂಗಪಟ್ಟಣದವನು. ಮೈಸೂರಿನ ಅಭಿವೃದ್ಧಿಗೆ ಇಲ್ಲಿನ ರಾಜರ ಕೊಡುಗೆಯಿದೆ. ಮೈಸೂರಿನ ಮಹಾರಾಜರು ಕೊಟ್ಟಿರುವ 100 ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪುವನ್ನು ಬೆಂಬಲಿಸುವವರು ಟಿಪ್ಪು ಕೊಟ್ಟಿರುವ 3 ಸಾಧನೆಗಳನ್ನು ಹೇಳಲಿ ಸಾಕು. ಇದೇ ಕಾರಣಕ್ಕಾಗಿ ನಾನು ಉದ್ದೇಶ ಪೂರ್ವಕವಾಗಿಯೇ ಪ್ರಯತ್ನಪಟ್ಟು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ್ದೇನೆ” ಎಂದು ಹೇಳಿದ್ದಾರೆ.

“ಟಿಪ್ಪು ಒಬ್ಬ ಕನ್ನಡ ವಿರೋಧಿ. ಪರ್ಷಿಯನ್ ಭಾಷೆಯನ್ನು ಕನ್ನಡದ ಮೇಲೆ ಹೇರಿದ್ದಾನೆ. ಕಂದಾಯ ಇಲಾಖೆಯಲ್ಲಿನ ಪ್ರತಿಯೊಂದು ಪದಗಳು ಪರ್ಷಿಯನ್ ಕಡೆಯಿಂದ ಬಂದಿದ್ದು, ಅದನ್ನು ಬದಲಾಯಿಸಬೇಕು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top