News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪೇಜಾವರ ಶ್ರೀಗಳಿಂದ ಬಿಜೆಪಿ ಧುರೀಣ ಎಲ್‌.ಕೆ ಅಡ್ವಾಣಿ ಭೇಟಿ

ನವದೆಹಲಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಇಂದು ಬಿಜೆಪಿಯ ಧುರೀಣ ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಶ್ರೀಗಳು ರಾಮಮಂದಿರ ನಿರ್ಮಾಣ  ಹೋರಾಟದಲ್ಲಿ ಅಡ್ವಾಣಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಉತ್ತರ ಭಾರತ ಪ್ರವಾಸದಲ್ಲಿರುವ ಪೇಜಾವರ ಶ್ರೀಗಳು ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು ಮತ್ತು  ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು ಎಂದು ವರದಿಗಳು ತಿಳಿಸಿವೆ.

ಅಯೋಧ್ಯಾ ರಾಮಜನ್ಮಭೂಮಿ ಹೋರಾಟದಲ್ಲಿ ಅಡ್ವಾಣಿಯವರ ಕೊಡುಗೆಯನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು.

ಪೇಜಾವರ ಶ್ರೀಗಳು ಸೋಮವಾರ ಸಂಜೆ ಕೇಂದ್ರದ ಮಾಜಿ ಸಚಿವ  ಹಾಗೂ ರಾಮಜನ್ಮಭೂಮಿ ಆಂದೋಲನದಲ್ಲಿ ಭಾಗಿಯಾಗಿದ್ದ ಡಾ ಮುರಳಿ ಮನೋಹರ ಜೋಶಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಉತ್ತರಪ್ರದೇಶದ ಮಥುರಾಸಮೀಪ ಬರ್ಸಾನಾದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಗೋವಿಂದ ಧಾಮ ಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಶಿಲಾನ್ಯಾಸ ನೆರವೇರಿಸಿದ್ದಾರೆ.ಇದೆ ವೇಳೆ  ಉಜ್ಜಯಿನಿ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಪೇಜಾವರ ಶ್ರೀಗಳು ಮುಖ್ಯ ಅತಿಥಿಯಾಗಿ ವಿವಿಧ ಸಂತರೊಂದಿಗೆ ಭಾಗಿಯಾಗಿದ್ದಾರೆ.

ಪೇಜಾವರ ಶ್ರೀಗಳು ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top