News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪರಿಶಿಷ್ಟ ಕುಟುಂಬದ ಮನೆಯಲ್ಲಿ ತಿಂಡಿ ಸವಿದ ಬೊಮ್ಮಾಯಿ, ಬಿಎಸ್‌ವೈ

ವಿಜಯನಗರ: ಬಿಜೆಪಿಯ ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದರು.

ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದಲಿತ ಮಹಿಳೆ ಯಲ್ಲಮ್ಮ ಕೊಲ್ಲಾರಪ್ಪ ಅವರ ಮನೆಯಲ್ಲಿ ನಾಯಕರು ಉಪ್ಪಿಟ್ಟು, ವಗ್ಗರಣಿ, ಮಿರ್ಚಿ ಸೇವನೆ ಮಾಡಿ ಬಳಿಕ ಟೀ ಕುಡಿದರು. ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಶಾಸಕ ರಾಜುಗೌಡ ಕೂಡ ಈ ಸಂದರ್ಭದಲ್ಲಿ ಇದ್ದರು.

ನಂತರ ಅಂಬೇಡ್ಕರ್ ಕಾಲೋನಿಯಲ್ಲಿ ಸಂಚರಿಸಿದ ಮುಖ್ಯಮಂತ್ರಿಗಳು ಜನರ ಅಹವಾಲು ಆಲಿಸಿದರು. ಇದಾದ ಬಳಿಕ ಹೊಸಪೇಟೆಯತ್ತ ತೆರಳಿದರು. ಹೊಸಪೇಟೆಯ ವಾಲ್ಮೀಕಿ ಸಮುದಾಯದ ಬಾಹುಳ್ಯವಿರುವ ಐತಿಹಾಸಿಕ ಏಳು ಕೇರಿಗಳು ಎಂದು ಕರೆಯುವ ಪ್ರದೇಶದಲ್ಲಿ ಬಿಜೆಪಿ ನಾಯಕರು ಸಂಚಾರ ಮಾಡಿದರು.
ಕೇರಿಯಲ್ಲಿರುವ ಮಹರ್ಷಿ ವಾಲ್ಮೀಕಿ, ಏಕಲವ್ಯ, ಮದಕರಿ ನಾಯಕನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top