News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅ.28ರಂದು ‘ಕೋಟಿ ಕಂಠ ಗಾಯನ’: ನೋಂದಣಿ ಆರಂಭ

ಬೆಂಗಳೂರು: ಅ.28ರಂದು ಕರ್ನಾಟಕದಾದ್ಯಂತ  ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದ್ದು, ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ.

ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಅಭಿಯಾನವನ್ನು ಮತ್ತೆ ಪ್ರಾರಂಭಿಸಲಾಗಿದೆ.

ಅ.28ರಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’, ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವಾ’, ಡಾ.ಡಿ.ಎಸ್‌.ಕರ್ಕಿಯವರ ‘ಹಚ್ಚೇವು ಕನ್ನಡದ ದೀಪ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಈ ಹಾಡುಗಳೊಂದಿಗೆ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುತಪಡಿಸಬಹುದಾಗಿದೆ.

ಕೋಟಿ ಕಂಠ ಗಾಯನಕ್ಕೆ ಈಗಾಗಲೇ ನೋಂದಣಿ ಆರಂಭವಾಗಿದೆ. ನೋಂದಣಿಗೆ ಕ್ಯೂಆರ್‌ ಕೋಡ್‌ ಅನ್ನೂ ನೀಡಲಾಗಿದೆ. ಅಲ್ಲದೇ  https://kannadasiri.karnataka.gov.in/kkg/public/  ಲಿಂಕ್‌ಗೆ ಭೇಟಿ ಕೊಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top