News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಣಕಾಸು ವಂಚನೆ: ಪತ್ರಕರ್ತೆ ರಾಣಾ ಆಯೂಬ್‌ ವಿರುದ್ಧ ಪ್ರಕರಣ ದಾಖಲು

ನವದೆಹಲಿ:ಹಣಕಾಸು ವಂಚನೆ  ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಪತ್ರಕರ್ತೆ ರಾಣಾ ಅಯ್ಯೂಬ್ ಅವರು ಕೋವಿಡ್‌ ಸಂದರ್ಭದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಗಳಿಗಾಗಿ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ವೈಯಕ್ತಿಕ ಕಾರಣಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ  ಆರೋಪಪಟ್ಟಿಯಲ್ಲಿ ಅವರನ್ನು ಹೆಸರಿಸಿದೆ.

ಮೊದಲ ಕೋವಿಡ್-19 ಲಾಕ್‌ಡೌನ್ ಪ್ರಾರಂಭವಾದ ಒಂದು ತಿಂಗಳ ನಂತರ 2020 ರ ಏಪ್ರಿಲ್‌ನಲ್ಲಿ  ಅಯ್ಯೂಬ್ ಅವರು ಕ್ರೌಡ್‌ಫಂಡಿಂಗ್ ವೆಬ್‌ಸೈಟ್ Ketto ನಲ್ಲಿ ಮೂರು ಅಭಿಯಾನಗಳನ್ನು ನಡೆಸಿದರು ಮತ್ತು ಅಂದಾಜು ರೂ 2.69 ಕೋಟಿ ಸಂಗ್ರಹಿಸಿದರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ ಅಥವಾ ಎಫ್‌ಸಿಆರ್‌ಎ ಪ್ರಾಧಿಕಾರದಲ್ಲಿ ನೋಂದಾಯಿಸದೆ ವಿದೇಶದಿಂದ ಹಣವನ್ನು ಪಡೆದಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ದೇಣಿಗೆಗಳನ್ನು  ಅಯೂಬ್ ಅವರ ತಂದೆ ಮತ್ತು ಸಹೋದರಿಯ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಮತ್ತು ನಂತರ ಅವರ ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಅಯ್ಯೂಬ್ ಅವರು ಈ ಹಣವನ್ನು ಸಾರ್ವಜನಿಕರಿಂದ ಸ್ವೀಕರಿಸಿದ ಉದ್ದೇಶವು ಸ್ಥಿರ ಠೇವಣಿಗಳನ್ನು ರಚಿಸುವುದು ಮತ್ತು ಅವರ ಸ್ವಂತ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಹೆಚ್ಚಿಸುವುದು ಎಂದು ಇಡಿ ಆರೋಪಿಸಿದೆ.

 ಅಯ್ಯೂಬ್ ಅವರು ಕೊಳೆಗೇರಿ ನಿವಾಸಿಗಳು ಮತ್ತು ರೈತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸಿದರು. ಅಸ್ಸಾಂ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಪರಿಹಾರ ಕಾರ್ಯಗಳಿಗಾಗಿ ಮತ್ತು ಕೋವಿಡ್-19 ನಿಂದ ತೀವ್ರವಾಗಿ ಪೀಡಿತ ಜನರಿಗೆ ಸಹಾಯ ಮಾಡಲು ಹಣ ಸಂಗ್ರಹಿಸಿದ್ದರು, ಆದರೆ ಹಣವನ್ನು ಸ್ವಂತಕ್ಕೆ ಬಳಸಿದ್ದಾರೆ ಎಂದು ಇಡಿ ಆರೋಪಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top