News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರ: ಉಗ್ರರಿಂದ ಮತ್ತೊಬ್ಬ ಕಾಶ್ಮೀರಿ ಪಂಡಿತನ ಹತ್ಯೆ

ಶ್ರೀನಗರ: ಉದ್ದೇಶಿತ ಹತ್ಯೆಯ ಮತ್ತೊಂದು ಘಟನೆ ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಕಾಶ್ಮೀರಿ ಪಂಡಿತನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ನಿವಾಸಿ ಪುರನ್ ಕ್ರಿಶನ್ ಭಟ್ ಮೇಲೆ ದಾಳಿ ಉಗ್ರರು  ದಾಳಿ ನಡೆಸಿದ್ದಾರೆ. ಅವನ ನಿವಾಸದಲ್ಲೇ ದಾಳಿ ನಡೆದಿದೆ. ಭಟ್ ಅವರನ್ನು ಶೋಪಿಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಅಪರಾಧಿಗಳನ್ನು ಹಿಡಿಯಲು ಬೇಟೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್‌ ಮೂಲಳು ತಿಳಿಸಿವೆ.

“ಭಟ್ ಅವರಿಗೆ  7 ನೇ ತರಗತಿಯಲ್ಲಿ ಓದುತ್ತಿರುವ ಮಗಳು ಮತ್ತು 5 ನೇ ತರಗತಿಯಲ್ಲಿರುವ  ಮಗ ಇದ್ದಾನೆ. ಅವರು ತಮ್ಮ ಮನೆಯಿಂದ ಹೊರಬರುತ್ತಿರಲಿಲ್ಲ, ಮನೆಯೊಳಗೆ ಇರುತ್ತಿದ್ದರು. ನಾವು ತುಂಬಾ ಹೆದರಿದ್ದೇವೆ” ಎಂದು ಭಟ್‌ ಅವರ ಸಂಬಂಧಿಯೊಬ್ಬರು ಹೇಳಿದ್ದಾರೆ.

ಶೋಪಿಯಾನ್ ಜಿಲ್ಲೆಯ ಸೇಬಿನ ತೋಟದಲ್ಲಿ ಕಾಶ್ಮೀರಿ ಪಂಡಿತನೊಬ್ಬ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕೆಲವೇ ತಿಂಗಳ ನಂತರ ಈ ಘಟನೆ ಸಂಭವಿಸಿದೆ.

ಆಗಸ್ಟ್ ದಾಳಿಯ ಹೊಣೆಯನ್ನು ಅಲ್ ಬದ್ರ್‌ನ ಒಂದು ಶಾಖೆಯಾದ ‘ಕಾಶ್ಮೀರ್ ಫ್ರೀಡಂ ಫೈಟರ್ಸ್’ ಹೊತ್ತುಕೊಂಡಿದೆ. ಸ್ವಾತಂತ್ರ್ಯ ದಿನಾಚರಣೆಯ ವೇಳೆ ‘ತಿರಂಗಾ ರ್ಯಾಲಿ’ಗಳಲ್ಲಿ ಭಾಗವಹಿಸಲು ಜನರನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಪಂಡಿತ್ ಸಹೋದರರನ್ನು ಗುರಿಯಾಗಿಸಿಕೊಂಡಿರುವುದಾಗಿ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top