News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತುಮಕೂರು: ಕ್ರೈಸ್ಥ ಮತದಿಂದ ಮತ್ತೆ ಹಿಂದೂ ಧರ್ಮಕ್ಕೆ ಮರಳಿದ 15 ಮಂದಿ

ಬೆಂಗಳೂರು: ಕೆಲ ವರ್ಷಗಳ ಹಿಂದೆ ಕ್ರೈಸ್ಥ ಮತಕ್ಕೆ ಮತಾಂತರಗೊಂಡಿದ್ದ 15 ಜನರು ಮರಳಿ ಹಿಂದೂ ಧರ್ಮಕ್ಕೆ ಬಂದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿ ನೆಲಗುಂದನಹಟ್ಟಿ ಗ್ರಾಮದಲ್ಲಿ ನಡೆದಿದೆ.

“ನೆಲಗುಂದನಹಟ್ಟಿ ಗ್ರಾಮದಲ್ಲಿ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ಘರ್ ವಾಪಸಿಯಾಗಿದ್ದಾರೆ” ಎಂದು ವರದಿಗಳು ತಿಳಿಸಿವೆ.

ನವಭಾರತ ಹಿಂದೂ ದಲಿತ ಸಂಘ ಇವರನ್ನು ಮರಳಿ ಹಿಂದೂ ಧರ್ಮಕ್ಕೆ ಬರುವಂತೆ ಮಾಡಿದೆ.

ಕೆಲವು ವರ್ಷಗಳ ಹಿಂದೆ ಕೂಲಿ ಕೆಲಸ ಮಾಡಿಕೊಂಡಿದ್ದ ಸುಮಾರು 35 ಕುಟುಂಬದ 68 ಜನರು ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದರು. ಮತಾಂತರಗೊಂಡ 68 ಜನರು ಎಸ್​ಸಿ ಪ್ರಮಾಣ ಪತ್ರವನ್ನು ಹೊಂದಿದ್ದಾರೆ. ಇವರುಗಳನ್ನು ವಿವಿಧ ರೀತಿಯ ಆಮಿಷಕ್ಕೆ ಒಳಪಡಿಸಿ ಮತಾಂತರ ಮಾಡಲಾಗಿದೆ ಎಂಬ ಆರೋಪ ಇದೆ.

68 ಜನರ ಪೈಕಿ 15 ಜನರನ್ನು ಇಂದು ನವಭಾರತ ಹಿಂದೂ ದಲಿತ ಸಂಘ ಪ್ರತಿಜ್ಞೆ ಬೋಧಿಸುವ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಕರೆತಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top