News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಅರುಣ್ ಸಿಂಗ್

ಬೆಂಗಳೂರು: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ ಜಿಲ್ಲೆಯ ಮಾಸೂರಿನಲ್ಲಿ ಇಂದು ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಪಡೆಯಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಗಳಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಜನರು ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿಜಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ. ಮನೆಮನೆಗೆ ನಳ್ಳಿ ನೀರು ಅಭಿಯಾನ ಯಶಸ್ವಿಯಾಗಿದೆ ಎಂದು ವಿವರಿಸಿದರು. ಉಜ್ವಲ ಯೋಜನೆ, ಶೌಚಾಲಯ ನಿರ್ಮಾಣದಂಥ ಪ್ರಮುಖ ಯೋಜನೆಗಳು ಜಾರಿಯಾಗಿವೆ ಎಂದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿತ್ತು. ಆದರೆ, ಮೋದಿಜಿ ಸರಕಾರವು ರೈತರು ಮತ್ತು ಬಡವರ ಪರವಾಗಿದೆ. ಈ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಕಾಂಗ್ರೆಸ್ 2 ರಾಜ್ಯಗಳಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದೆ. ಮುಂದೆ ಅಲ್ಲಿಯೂ ಅದು ಅಧಿಕಾರ ಕಳಕೊಳ್ಳಲಿದೆ. ಭಾರತ್ ಜೋಡೋ ಯಾತ್ರೆ ನಡುವೆ ಅನೇಕ ಕಾಂಗ್ರೆಸ್ಸಿಗರು ಆ ಪಕ್ಷ ತೊರೆಯುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರಗಳ ಜನಪರ ಕಾರ್ಯಗಳ ಕುರಿತು ಮಾಹಿತಿ ನೀಡಿ, ಬಿಜೆಪಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಅತಿ ಹೆಚ್ಚು ಮತದೊಂದಿಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು.
ಮಾಡಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top