News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ, ಅಭಿವೃದ್ಧಿ ಪರ್ವ: ಸಚಿವ ಪ್ರಭು ಚೌಹಾಣ್

ಬೆಂಗಳೂರು: ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ ಮತ್ತು ಅಭಿವೃದ್ಧಿ ಪರ್ವವು ಬಿಜೆಪಿ ಸರಕಾರದ ಮೂಲಕ ಈಡೇರುತ್ತಿದೆ ಎಂದು ರಾಜ್ಯದ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದರು.

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಬೊಮ್ಮಾಯಿಯವರು ಈಡೇರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ತಿಳಿಸಿದರು.

ರಾಜ್ಯವು ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಅನೇಕ ಯೋಜನೆಗಳನ್ನು ಬೊಮ್ಮಾಯಿಯವರು ಕೈಗೊಂಡಿದ್ದಾರೆ. ಮಹಿಳಾ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಗರಿಷ್ಠ ಅನುದಾನವನ್ನು ಔರಾದ್‍ಗೆ ನೀಡಿವೆ ಎಂದು ಮೆಚ್ಚುಗೆ ಸೂಚಿಸಿದರು.

ಪ್ರತಿ ಮನೆಗೆ ನಳ್ಳಿ ನೀರು ಒದಗಿಸಲು ನಮ್ಮ ಸರಕಾರ ಬದ್ಧವಿದೆ ಎಂದರು.

ಕಿಸಾನ್ ಸಮ್ಮಾನ್ ಸೇರಿ ಅನೇಕ ಯೋಜನೆಗಳ ಮೂಲಕ ಕೇಂದ್ರ ಸರಕಾರವು ದೇಶದ ಎಲ್ಲ ಸಮುದಾಯದವರ ವಿಕಾಸಕ್ಕೆ ಶ್ರಮಿಸಿದೆ. ರಾಜ್ಯ ಸರಕಾರವೂ ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು. ಕಾರಂಜಾದಿಂದ ಔರಾದ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿ ಕೊಡಿ ಎಂದು ಅವರು ಮನವಿ ಮಾಡಿದರು. ಪುರಸಭೆಯನ್ನಾಗಿ ಪ್ರಕಟಿಸಿ ಎಂದು ವಿನಂತಿಸಿದರು. ಮರಾಠಾ ಮೀಸಲಾತಿಯನ್ನು 2 ಎಗೆ ಬದಲಿಸಿ ಎಂದು ಮನವಿ ಮಾಡಿದರು.

ಗೋಶಾಲೆಗಳ ಸಂಬಂಧ 100 ಕೋಟಿ ಅನುದಾನ ನೀಡಲಾಗಿದೆ ಎಂದ ಅವರು ತಮ್ಮ ಸಚಿವಾಲಯದ ಮೂಲಕ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top