News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಲ್ಲಾ ಹೊಸ ರಾಷ್ಟ್ರೀಯ ಹೆದ್ದಾರಿಗಳು ಹೆಲಿಪ್ಯಾಡ್‌ ಹೊಂದಿರಲಿವೆ

ನವದೆಹಲಿ:  ದೇಶದಲ್ಲಿ ನಿರ್ಮಾಣವಾಗಲಿರುವ ಎಲ್ಲಾ ಹೊಸ ರಾಷ್ಟ್ರೀಯ ಹೆದ್ದಾರಿಗಳು ತುರ್ತು ಸಂದರ್ಭಗಳಲ್ಲಿ ತಕ್ಷಣದ ಸ್ಥಳಾಂತರಕ್ಕಾಗಿ ಹೆಲಿಪ್ಯಾಡ್‌ಗಳನ್ನು ಹೊಂದಿರುತ್ತವೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, “ನಾವು ರಸ್ತೆ ಸಾರಿಗೆ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ್ದೇವೆ, ಎಲ್ಲಾ ಹೊಸ ಹೆದ್ದಾರಿಗಳಲ್ಲಿ ಹೆಲಿಪ್ಯಾಡ್‌ಗಳನ್ನು ಹೊಂದಿರಬೇಕು ಇದರಿಂದ ಮೂಲಸೌಕರ್ಯಗಳು ಬೆಳೆಯುತ್ತವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಹೆಲಿಪ್ಯಾಡ್‌ಗಳು ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಥಳಾಂತರಿಸಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನವನ್ನು ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದು, ನಾಗರಿಕ ವಿಮಾನಯಾನ ಸಚಿವಾಲಯದ ಪ್ರತಿನಿಧಿಗಳು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ೀ ಸಂದರ್ಭದಲ್ಲಿ ಸಿಂಧಿಯಾ ಅವರು ಪಶ್ಚಿಮ ಬಂಗಾಳ, ದೆಹಲಿ ಮತ್ತು ಪಂಜಾಬ್ ಸೇರಿದಂತೆ ಎಂಟು ರಾಜ್ಯಗಳಲ್ಲಿ ಶ್ರೇಣಿ-II, ಶ್ರೇಣಿ-III ನಗರಗಳಿಗೆ ವಾಯು ಸಂಪರ್ಕವನ್ನು ಸುಲಭಗೊಳಿಸಲು ಏರ್ ಟರ್ಬೈನ್ ಇಂಧನ (ATF) ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದರು.

ಅಸ್ಸಾಂ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ರಾಜಸ್ಥಾನ, ಬಿಹಾರ ಮತ್ತು ಪಂಜಾಬ್ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗಾಗಿ ಎಟಿಎಫ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಸಚಿವರು ಮನವಿ ಮಾಡಿದರು. ಎಟಿಎಫ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದರೆ ಈ ಎಂಟು ರಾಜ್ಯಗಳಲ್ಲಿ ವಿಮಾನ ಸಂಪರ್ಕವನ್ನು ಹೆಚ್ಚಿಸುವುದಾಗಿ ಸಿಂಧಿಯಾ ಭರವಸೆ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top