News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೀಪಾವಳಿಗೆ ಪಟಾಕಿ ಹೊಡೆದರೆ 6 ತಿಂಗಳು ಸೆರೆವಾಸ: ದೆಹಲಿ ಆಪ್ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಸಿಡಿಸುವವರಿಗೆ ದಂಡ ವಿಧಿಸಲಾಗುವುದು ಎಂದು ದೆಹಲಿ ಸರ್ಕಾರ ಘೋಷಿಸಿದೆ.

ಪಟಾಕಿಗಳ ಉತ್ಪಾದನೆ, ದಾಸ್ತಾನು ಮತ್ತು ಆನ್‌ಲೈನ್ ಮತ್ತು ಆಫ್‌ಲೈನ್ ಮಾರಾಟದಲ್ಲಿ ತೊಡಗಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಎಎಪಿ ಸರ್ಕಾರ ಎಚ್ಚರಿಕೆ ನೀಡಿದೆ.

ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟವನ್ನು ತಡೆಗಟ್ಟುವ ಸಲುವಾಗಿ ದೆಹಲಿ ಸರ್ಕಾರವು ಕಳೆದ ತಿಂಗಳು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತು. ಮುಂದಿನ ವರ್ಷದ ಜನವರಿ 1ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ.

ನವದೆಹಲಿಯಲ್ಲಿ ನಿನ್ನೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಅವರು, ಪಟಾಕಿಗಳ ಉತ್ಪಾದನೆ, ದಾಸ್ತಾನು, ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪಟಾಕಿ ಮಾರಾಟದಲ್ಲಿ ತೊಡಗಿರುವವರಿಗೆ ಸ್ಫೋಟಕ ಕಾಯ್ದೆಯಡಿ ಐದು ಸಾವಿರ ರೂಪಾಯಿಗಳವರೆಗೆ ದಂಡ ಮತ್ತು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.  ಪಟಾಕಿ ಸಿಡಿಸುವವರಿಗೆ ಇನ್ನೂರು ರೂಪಾಯಿಗಳ ದಂಡ ಮತ್ತು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಬಹುದು‌ ಎಂದಿದ್ದಾರೆ.

ಪಟಾಕಿ ಸಿಡಿಸುವುದನ್ನು ತಡೆಯಲು ಕಣ್ಗಾವಲುಗಾಗಿ 400ಕ್ಕೂ ಹೆಚ್ಚು ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.

ಪಟಾಕಿಗಳ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡಲು ಮತ್ತು ಅರಿವು ಮೂಡಿಸಲು ದೆಹಲಿ ಸರ್ಕಾರ ನಾಳೆಯಿಂದ ‘ದಿಯೆ ಜಲವೋ-ಪತಾಖೆ ನಹಿಂ’ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಸಚಿವರು ಹೇಳಿದರು. ಅಭಿಯಾನದ ಅಡಿಯಲ್ಲಿ ನವದೆಹಲಿಯ ಸೆಂಟ್ರಲ್ ಪಾರ್ಕ್‌ನಲ್ಲಿ 51 ಸಾವಿರ ದೀಪಗಳನ್ನು ಬೆಳಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top