News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವಕಪ್‌ ಆಡಲು ಭಾರತಕ್ಕೆ ಹೋಗಲ್ಲ ಎಂದ ಪಾಕ್‌ಗೆ ಕ್ರೀಡಾ ಸಚಿವರ ತೀಕ್ಷ್ಣ ಉತ್ತರ

ನವದೆಹಲಿ:  ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನಿಂದ ಹಿಂದೆ ಸರಿಯುವ ಪಾಕಿಸ್ಥಾನದ ಬೆದರಿಕೆಗೆ ಭಾರತ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. “ನೀವು ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ “ಎಲ್ಲಾ ಅಗ್ರ ತಂಡಗಳು ವಿಶ್ವಕಪ್‌ಗಾಗಿ ಭಾರತಕ್ಕೆ ಬರುತ್ತಿವೆ” ಎಂದಿದ್ದಾರೆ.

“ಮುಂದಿನ ವರ್ಷ ಭಾರತದಲ್ಲಿ ODI ವಿಶ್ವಕಪ್ ನಡೆಯಲಿದ್ದು, ಜಗತ್ತಿನ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ.  ನೀವು ಯಾವುದೇ ಕ್ರೀಡೆಯಲ್ಲಿ ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಭಾರತವು ಕ್ರೀಡೆಗೆ, ವಿಶೇಷವಾಗಿ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಭಾರತವಿಲ್ಲದ ಕ್ರಿಕೆಟ್ ಎಂದರೇನು?” ಎಂದು ಕ್ರೀಡಾ ಸಚಿವರು ಪ್ರಶ್ನಿಸಿದ್ದಾರೆ.

ಮುಂದಿನ ವರ್ಷದ ಏಷ್ಯಾ ಕಪ್‌ಗಾಗಿ ಭಾರತವು ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಪಂದ್ಯಾವಳಿಯನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬಹುದು ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಮಂಗಳವಾರ ಹೇಳಿದ ನಂತರ ವಿವಾದ ಸೃಷ್ಟಿಯಾಗಿದೆ.

ಕ್ರಿ”ಕೆಟ್ ತಂಡದ ಪ್ರಯಾಣದ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸುತ್ತದೆ. ಆಟಗಾರರ ಸುರಕ್ಷತೆ ಮತ್ತು ಭದ್ರತೆಯು  ಪ್ರಮುಖ ವಿಷಯವಾಗಿದೆ, ”ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top