ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಸಿದ್ಧ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಉತ್ತರಾಖಂಡ್ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. ಪವಿತ್ರ ದೇಗುಲಕ್ಕೆ ಪ್ರವೇಶಿಸುವ ವೇಳೆ ಪ್ರಧಾನಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿದ್ದರು.
ಬೆಳಗ್ಗೆ 8.30ರ ಸುಮಾರಿಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ನಂತರ ಬಾಬಾ ಕೇದಾರ ದರ್ಶನಕ್ಕೆ ತೆರಳಿದರು. ಸಂಜೆ 9.7 ಕಿ.ಮೀ ಉದ್ದದ ಗೌರಿಕುಂಡ್-ಕೇದಾರನಾಥ ರೋಪ್ವೇ ಯೋಜನೆಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಾನಾ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ವೇ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ, ನದಿ ಮುಂಭಾಗದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಆಗಮನ ಪ್ಲಾಜಾ ಮತ್ತು ಕೆರೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ಅವರು ಬದರಿನಾಥ್ಗೆ ಕೂಡ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಸಲಿದ್ದಾರೆ. ಅವರ ಭೇಟಿ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳೆರಡೂ ಕ್ವಿಂಟಾಲ್ ಗಟ್ಟಲೆ ಹೂವುಗಳಿಂದ ಅಲಂಕರಿಸಲ್ಪಟ್ಟಿವೆ.
ಬೆಳಿಗ್ಗೆ 11:30 ರ ಸುಮಾರಿಗೆ ಅವರು ಬದರಿನಾಥ ದೇವಸ್ಥಾನದಲ್ಲಿ ‘ದರ್ಶನ’ ಮತ್ತು ‘ಪೂಜೆ’ ನಡೆಸಲಿದ್ದಾರೆ ಎಂದು ಪಿಎಂಒ ತಿಳಿಸಿದೆ.
ಅವರು ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮಂದಾಕಿನಿ ಅಸ್ತಪತ್ ಮತ್ತು ಸರಸ್ವತಿ ಅಸ್ತಪತ್ನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.
#WATCH | PM Narendra Modi performs 'puja' at the Kedarnath Dham
(Source: DD) pic.twitter.com/9i9UkQ5jgr
— ANI (@ANI) October 21, 2022
PM Shri @narendramodi performs Darshan & Pooja at Shri Kedarnath Temple in Uttarakhand. #ModiInDevBhumi https://t.co/lGU7l9WMhK
— BJP (@BJP4India) October 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.