News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿರಿಧಾನ್ಯ ವರ್ಷವನ್ನು ಜಾಗತಿಕ ಮಟ್ಟದಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದೆ ಭಾರತ

ನವದೆಹಲಿ: ಭಾರತವು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನು ಜಾಗತಿಕ ಮಟ್ಟದಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ನಿನ್ನೆ ನವದೆಹಲಿಯಲ್ಲಿ ಬೋಟ್ಸ್ವಾನಾದ ಅಂತರಾಷ್ಟ್ರೀಯ ವ್ಯವಹಾರಗಳು ಮತ್ತು ಸಹಕಾರ ಸಚಿವ ಡಾ.ಲೆಮೊಗ್ಯಾಂಗ್ ಕ್ವಾಪೆ ಅವರೊಂದಿಗೆ ಸಭೆಯನ್ನು ನಡೆಸಿದ ಬಳಿಕ ಅವರು ಈ ವಿಷಯವನ್ನು ತಿಳಿಸಿದರು.

ಭಾರತಕ್ಕೆ ಭೇಟಿ ನೀಡಿರುವ ಡಾ. ಲೆಮೊಗ್ಯಾಂಗ್ ಕ್ವಾಪೆ ಅವರು  ತೋಮರ್ ಅವರನ್ನು ಭೇಟಿಯಾಗಿ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಇಬ್ಬರೂ ಸಚಿವರು ತೃಪ್ತಿ ವ್ಯಕ್ತಪಡಿಸಿದರು. ಬೋಟ್ಸ್ವಾನಾದ ಆರ್ಥಿಕತೆಗೆ ಸಾಗರೋತ್ತರ ಭಾರತೀಯರು ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು  ತೋಮರ್ ಹೇಳಿದರು. ಎರಡೂ ದೇಶಗಳ ರೈತರು ಮತ್ತು ಉತ್ಪಾದಕರ ಪ್ರಯೋಜನಗಳನ್ನು ಹೆಚ್ಚಿಸಲು ದ್ವಿಪಕ್ಷೀಯ ವ್ಯಾಪಾರವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಅವರು ಮಾತನಾಡಿದರು.

ಪೌಷ್ಠಿಕಾಂಶದ ಮೌಲ್ಯ ಮತ್ತು ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಪೌಷ್ಠಿಕ-ಧಾನ್ಯಗಳ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲು ಇಬ್ಬರೂ ಮಂತ್ರಿಗಳು ಒತ್ತು ನೀಡಿದರು. ಎರಡೂ ಕಡೆಯವರು ತಮ್ಮ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶದ ಸಮಸ್ಯೆಗಳನ್ನು ಚರ್ಚಿಸಿದರು ಮತ್ತು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಭರವಸೆ ನೀಡಿದರು. 2010ರ ಜನವರಿಯಲ್ಲಿ ಎರಡು ಸರ್ಕಾರಗಳ ನಡುವೆ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರಕ್ಕೆ ಸಹಿ ಹಾಕಲಾದ ಒಪ್ಪಂದ ಪತ್ರದ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆ ಇಡಲು ಇಬ್ಬರೂ ಸಚಿವರು ಒಪ್ಪಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top