News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅರುಣಾಚಲ ಹೆಲಿಕಾಪ್ಟರ್ ಪತನ: ಮೃತರಲ್ಲಿ ಕಾಸರಗೋಡು ಯೋಧ

ಕಾಸರಗೋಡು: ನಿನ್ನೆ ಅರುಣಾಚಲ ಪ್ರದೇಶದಲ್ಲಿ ಪತನಕ್ಕೀಡಾದ ಹೆಲಿಕಾಫ್ಟರ್‌ನಲ್ಲಿ ಇದ್ದ ಎಲ್ಲಾ ನಾಲ್ವರು ಸೈನಿಕರು ಬಲಿಯಾಗಿದ್ದಾರೆ. ಈ ಬಗ್ಗೆ ಸೇನೆಯ ಅಧಿಕಾರಿಗಳು ಅವರ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಬಲಿಯಾದ ನಾಲ್ವರು ಯೋಧರ ಪೈಕಿ ಕಾಸರಗೋಡು ಜಿಲ್ಲೆಯ ಚಿರುವತ್ತೂರು ಕೆಳಕ್ಕೇಮುರಿ ಗ್ರಾಮದ ಕೆವಿ ಅಶ್ವಿನ್ ಕೂಡ ಸೇರಿದ್ದಾರೆ. ಇವರು ನಾಲ್ಕು ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಅಂಡ್ ಮೆಕ್ಯಾನಿಕಲ್
ಇಂಜಿನಿಯರಿಂಗ್ ವಿಭಾಗದಲ್ಲಿ ಎಂಜಿನಿಯರ್ ಆಗಿ ಸೇನೆಗೆ ಸೇರಿದ್ದರು ಎಂದು ಹೇಳಲಾಗಿದೆ.

ಇವರ ಸಾವಿನಿಂದ ಅವರ ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಅಪಾರ ಸಂಖ್ಯೆಯ ಜನರು ಅವರ ಮನೆಯತ್ತ ಧಾವಿಸುತ್ತಿದ್ದಾರೆ.

ವರದಿಗಳ ಪ್ರಕಾರ ಅಕ್ಟೋಬರ್ 23ರಂದು ಅವರ ಮೃತ ದೇಹ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top