ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು” ಎಂದಿದ್ದಾರೆ.
ಕನ್ನಡ ಚಿತ್ರರಂಗದ ಗಣ್ಯರು ಮತ್ತು ರಾಜಕೀಯ ನೇತಾರರು, ಕನ್ನಡಾಭಿಮಾನಿಗಳು ಎಲ್ಲರೂ ಇಂದು ಪುನೀತ್ ಅವರನ್ನು ಸ್ಮರಿಸಿ ನಮಿಸುತ್ತಿದ್ದಾರೆ.
ಪುನೀತ್ ಅವರ ಕುಟುಂಬಸ್ಥರು ಅವರ ಸಮಾಧಿಗೆ ತೆರಳಿ ಇಂದು ಪೂಜೆ ನೆರವೇರಿಸಿದ್ದಾರೆ.
ಇನ್ನೊಂದೆಡೆ ಪುನೀತ್ ಅಭಿನಯದ ಕೊನೆಯ ಚಿತ್ರ ʼಗಂಧದ ಗುಡಿʼ ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು.
ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು. pic.twitter.com/NKwlckUlDU
— Basavaraj S Bommai (@BSBommai) October 29, 2022
ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆದಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ಅಪ್ಪು ಶ್ರೀ ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ. pic.twitter.com/s3T8qeBdAc
— B.S.Yediyurappa (@BSYBJP) October 29, 2022
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣೆ😔@PuneethRajkumar #gandagudifilm #Kiccha46 pic.twitter.com/FWBS47pd9r
— R̺X̺ K̺I̺C̺C̺H̺A̺ B̺O̺S̺S̺ (@Nagu_nayak07) October 29, 2022
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣೆ😔@PuneethRajkumar #gandagudifilm #Kiccha46 pic.twitter.com/FWBS47pd9r
— R̺X̺ K̺I̺C̺C̺H̺A̺ B̺O̺S̺S̺ (@Nagu_nayak07) October 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.