ಲಕ್ನೋ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರಪ್ರದೇಶ ವಿಧಾನಸಭೆಯು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ.
ಯುಪಿ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದುಬೆ ಅವರು ರಾಮ್ಪುರ ಸದರ್ ಅಸೆಂಬ್ಲಿ ಸ್ಥಾನ ಖಾಲಿ ಇದೆ ಎಂದು ಅಸೆಂಬ್ಲಿ ಸೆಕ್ರೆಟರಿಯೇಟ್ ಘೋಷಿಸಿದೆ ಎಂದು ಹೇಳಿದ್ದಾರೆ. ಅಜಂ ಖಾನ್ ರಾಮ್ಪುರ ಸದರ್ ಶಾಸಕರಾಗಿದ್ದಾರೆ.
“ಆಜಂ ಖಾನ್ಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿರುವುದರಿಂದ ಅವರು ಈಗ ಉಭಯ ಸದನಗಳಿಂದ ಅನರ್ಹಗೊಂಡಿದ್ದಾರೆ ಮತ್ತು ಈಗ ರಾಂಪುರ ಸದರ್ ಅಸೆಂಬ್ಲಿ ಸ್ಥಾನ ತೆರವಾಗಿದೆ, ಆದ್ದರಿಂದ ಉಪ ಚುನಾವಣೆಯಲ್ಲಿ ನಡೆದರೆ ಅಲ್ಲಿ ಕಮಲ ಅರಳುತ್ತದೆ” ಎಂದು ಯುಪಿ ಉಪ ಮಖ್ಯಮಂತ್ರಿ ಕೆಪಿ ಮೌರ್ಯ ಹೇಳಿದ್ದಾರೆ.
ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ಯಾರಾದರೂ ಅಪರಾಧ ಸಾಬೀತಾದ ದಿನಾಂಕದಿಂದ ಶಾಸಕ ಸ್ಥಾನದಿಂದ ಅನರ್ಹರಾಗುತ್ತಾರೆ ಮತ್ತು ಜೈಲಿನಲ್ಲಿ ಇದ್ದ ನಂತರ ಇನ್ನೂ ಆರು ವರ್ಷಗಳವರೆಗೆ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ ಹೇಳುತ್ತದೆ.
2019 ರ ಏಪ್ರಿಲ್ನಲ್ಲಿ ಚುನಾವಣಾ ಸಭೆಯಲ್ಲಿ ರಾಂಪುರದ ಆಡಳಿತ ಅಧಿಕಾರಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಕ್ಕಾಗಿ ಅಜಂ ವಿರುದ್ಧ ದ್ವೇಷದ ಭಾಷಣದ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಅಜಂ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.