ಬೆಂಗಳೂರು: ಇಂದು 67ನೇ ಕನ್ನಡ ರಾಜ್ಯೋತ್ಸವ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ” ಎಂದಿದ್ದಾರೆ.
ಇಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ ಗೌರವಿಸಲಾಗುತ್ತಿದೆ. ಇದಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಸುಮಾರು 10,000 ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಾರ್ವಜನಿಕರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
"ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ." ಮುಖ್ಯಮಂತ್ರಿ : @BSBommai #ರಾಜ್ಯೋತ್ಸವ_ರಾಷ್ಟ್ರೋತ್ಸವ pic.twitter.com/4HQBMYRJqG
— CM of Karnataka (@CMofKarnataka) November 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.