ಬೆಂಗಳೂರು: ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಮೊದಲ ದಿನವೇ ನಿರೀಕ್ಷೆಗೂ ಮೀರಿದ ಬಂಡವಾಳವನ್ನು ಆಕರ್ಷಣೆ ಮಾಡಿದೆ. ವರದಿಗಳ ಪ್ರಕಾರ, ಮೊದಲ ದಿನದ ಹೂಡಿಕೆ ಒಪ್ಪಂದಗಳ ಒಟ್ಟು ಮೊತ್ತ 7.6 ಲಕ್ಷ ಕೋಟಿ ತಲುಪಿದೆ.
ಹೆಚ್ಚಿನ ಪ್ರಮಾಣದ ಹೂಡಿಕೆಯು ಗ್ರೀನ್ ಹೈಡ್ರೋಜನ್ ವಲಯದಲ್ಲಿ ನಡೆಯಲಿದೆ. ಅಲ್ಲದೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ಕೂಡ ವಿವಿಧ ಕಂಪನಿಗಳು ದೊಡ್ಡ ಪ್ರಮಾಣದಲ್ಲಿ ಹಣ ತೊಡಗಿಸಲಿವೆ.
ಮುಂದಿನ ಏಳು ವರ್ಷಗಳಲ್ಲಿ ಅದಾನಿ ಸಮೂಹವು ಕರ್ನಾಟಕದಲ್ಲಿ ಒಟ್ಟು 1 ಲಕ್ಷ ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಲಿದೆ ಎಂದು ಕರಣ್ ಅದಾನಿ ತಿಳಿಸಿದ್ದಾರೆ.
ಅದಾನಿ ಸಮೂಹವು ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚಿನ ಹೂಡಿಕೆಯನ್ನು ಮಾಡಲಿದೆ. ಕರಾವಳಿ ಭಾಗದಲ್ಲಿ ಅದಾನಿ ವಿಲ್ಮಾರ್ ಕಂಪನಿಯು ತನ್ನ ವಹಿವಾಟು ವಿಸ್ತರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ಸಜ್ಜನ್ ಜಿಂದಾಲ್ ಅವರು ಮುಂದಿನ ಐದು ವರ್ಷದಲ್ಲಿ ಕರ್ನಾಟಕದಲ್ಲಿ ಒಂದು ಲಕ್ಷ ಕೋಟಿಯಷ್ಟು ಹೂಡಿಕೆ ಮಾಡುವ ಆಲೋಚನೆ ಇರುವುದಾಗಿ ಘೋಷಿಸಿದ್ದಾರೆ.
ಒಟ್ಟಿನಲ್ಲಿ ಹಲವು ವರ್ಷಗಳ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶವೂ ನಿರೀಕ್ಷೆಗೂ ಮೀರಿದ ಯಶಸ್ಸನ್ನು ಸಾಧಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.