ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯುವ ಬಗ್ಗೆ ಸುಳಿವು ನೀಡಿದ ಹಿನ್ನೆಲೆಯಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎಡಿಎಸ್ ಔಜ್ಲಾ ಅವರು ಪ್ರತಿಕ್ರಿಯೆ ನೀಡಿ, ಸರ್ಕಾರದ ಆದೇಶದ ಮೇರೆಗೆ ಭಾರತೀಯ ಸೇನೆಯು ಕ್ರಮಕ್ಕೆ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವರ ಹೇಳಿಕೆಗಳ ಕುರಿತು ಹಿರಿಯ ಸೇನಾಧಿಕಾರಿ ಶ್ರೀನಗರದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸುತ್ತಿದ್ದು. “ಕೇಂದ್ರ ಸರ್ಕಾರವು ಅಂತಹ ನಿರ್ಧಾರವನ್ನು ತೆಗೆದುಕೊಂಡಾಗ ನಮಗೆ ಆದೇಶಗಳು ಬರುತ್ತವೆ ಮತ್ತು ಅಂತಹ ಪರಿಸ್ಥಿತಿಯನ್ನು ಎದುರಿಸಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ. ನಮ್ಮ ಸಾಂಪ್ರದಾಯಿಕ ಶಕ್ತಿಯ ಜೊತೆಗೆ ನಾವು ಆಧುನಿಕವಾಗಿಯೂ ನಮ್ಮನ್ನು ಬಲಪಡಿಸುತ್ತಿದ್ದೇವೆ, ಹೀಗಾಗಿ ನಾವು ಅಂತಹ ಪರಿಸ್ಥಿತಿಯಲ್ಲಿ ಹಿಂತಿರುಗಿ ನೋಡಬೇಕಾದ ಅಗತ್ಯವೇ ಇಲ್ಲ” ಎಂದು ಲೆಫ್ಟಿನೆಂಟ್ ಜನರಲ್ ಔಜ್ಲಾ ಹೇಳಿದ್ದಾರೆ.
ಅಕ್ಟೋಬರ್ 27 ರಂದು ಶ್ರೀನಗರದಲ್ಲಿ ‘ಶೌರ್ಯ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, “ನಾವು ಉತ್ತರಕ್ಕೆ ನಡೆಯಲು ಪ್ರಾರಂಭಿಸಿದ್ದೇವೆ, ಗಿಲ್ಗಿಟ್-ಬಾಲ್ಟಿಸ್ತಾನ್ ತಲುಪಿದಾಗ ಫೆಬ್ರವರಿ 22, 1994 ರಂದು ಭಾರತೀಯ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿದ ನಿರ್ಣಯವನ್ನು ನಾವು ಜಾರಿಗೆ ತಂದಾಗ ನಮ್ಮ ಪ್ರಯಾಣ ಪೂರ್ಣಗೊಳ್ಳುತ್ತದೆ” ಎಂದಿದ್ದರು.
ಎಲ್ಒಸಿಯಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಲೆಫ್ಟಿನೆಂಟ್ ಜನರಲ್ ಎಡಿಎಸ್ ಔಜ್ಲಾ, “ಪ್ರಸ್ತುತ ಪರಿಸ್ಥಿತಿ ಸಾಮಾನ್ಯದ ಲಕ್ಷಣಗಳನ್ನು ತೋರಿಸುತ್ತಿವೆ ಮತ್ತು ಕದನ ವಿರಾಮವನ್ನು ಉಳಿಸಿಕೊಳ್ಳುವುದು ಸವಾಲಾಗಿದೆ” ಎಂದು ಹೇಳಿದರು.
ಕಳೆದ 75 ವರ್ಷಗಳಲ್ಲಿ ಭಾರತೀಯ ಸೇನೆಯ ಸಾಮರ್ಥ್ಯಗಳನ್ನು ಉನ್ನತೀಕರಿಸಲಾಗಿದೆ. ನಮ್ಮ ಸನ್ನದ್ಧತೆಯು ಉತ್ತಮ ಮಟ್ಟದಲ್ಲಿದೆ ಎಂದಿದ್ದಾರೆ
“ಸದ್ಯ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ, ಆದರೆ ಅವಕಾಶ ಸಿಕ್ಕಾಗಲೆಲ್ಲಾ ಒಳನುಸುಳಲು ಪ್ರಯತ್ನಗಳು ನಡೆಯುತ್ತಿವೆ, ಆದರೆ ನಮ್ಮ ಗಡಿಯನ್ನು ರಕ್ಷಿಸಲು ಭಾರತೀಯ ಸೇನೆಯು ಸಂಪೂರ್ಣ ಬಲದೊಂದಿಗೆ ಸಿದ್ಧವಾಗಿದೆ” ಎಂದು ಹೇಳಿದರು.
BREAKING: The Indian Army is all set to take back POK, just waiting for the government's official confirmation, Chinar Corps Commander said..!!
Jai Hind🙌🇮🇳
— ADV. ASHUTOSH J. DUBEY 🇮🇳 (@AdvAshutoshBJP) November 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.