ಜೈಸಿಂಗ್ಪುರ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಜೈಸಿಂಗ್ಪುರ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ಜನರು ಪಿಒಕೆ ಬೇಕು, ಪಿಒಕೆ ಬೇಕು ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ನಗುತ್ತಾ ಪ್ರತಿಕ್ರಿಯೆ ನೀಡಿದ ರಾಜನಾಥ್ ಅವರು, ತಾಳ್ಮೆಯಿಂದಿರಿ ಎಂದಿದ್ದಾರೆ.
“ಇಂದು, ಹಿಮಾಚಲ ಪ್ರದೇಶ ರಾಜ್ಯದಲ್ಲಿ ಒಂದಲ್ಲ ಆರು ವೈದ್ಯಕೀಯ ಕಾಲೇಜುಗಳು ತೆರೆದಿವೆ ಅಥವಾ ತೆರೆಯಲಾಗುತ್ತಿದೆ. ಇಲ್ಲಿಯೂ AIIMS ತೆರೆಯಲಾಗಿದೆ” ಎಂದು ಸಿಂಗ್ ಹೇಳಿದರು.
“ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ರಕ್ಷಣಾ ಸಚಿವರು ಶ್ಲಾಘಿಸಿದ್ದು, ಇದರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಘಟನೆಗಳು ಕಡಿಮೆಯಾಗಿದೆ. ದೇಶದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲಾಗುವುದು ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, ಪ್ರಧಾನ ಮಂತ್ರಿ ಆಡಳಿತದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಘನತೆ ಹೆಚ್ಚಿದೆ ಎಂದು ಹೇಳಿದರು.
“ಪ್ರಧಾನಿ ಮೋದಿ ಪ್ರಧಾನಿಯಾದ ನಂತರ, ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಾಯಿತು ಎಂಬ ಅಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಇಂದು ಜಾಗತಿಕ ವೇದಿಕೆಯಲ್ಲಿ ಭಾರತ ಏನಾದರೂ ಹೇಳಿದರೆ, ಭಾರತ ಏನು ಹೇಳುತ್ತಿದೆ ಎಂಬುದನ್ನು ಇತರ ದೇಶಗಳು ಎಚ್ಚರಿಕೆಯಿಂದ ಆಲಿಸುತ್ತವೆ” ಎಂದು ಅವರು ಹೇಳಿದರು.
“ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಂಬಂಧಿತ ವಸ್ತುಗಳನ್ನು ಭಾರತದಲ್ಲಿ ಮಾತ್ರ ತಯಾರಿಸಬೇಕೆಂದು ನಿರ್ಧರಿಸಿದ್ದಾರೆ. ಅವರು ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ವರ್ಲ್ಡ್’ ಎಂದು ಹೇಳಿದರು. ಇಂದು ಭಾರತವು ವಿಶ್ವದ 25 ಟಾಪ್ ರಕ್ಷಣಾ ರಫ್ತುದಾರರಲ್ಲಿ ಸ್ಥಾನ ಪಡೆದಿದೆ” ಎಂದು ಅವರು ಹೇಳಿದರು.
#WATCH | Jaisinghpur, Himachal Pradesh: "Dhairya rakhiye," says Defence Minister Rajnath Singh as some people in a rally being addressed by him say they want PoK pic.twitter.com/mKIAW26lWs
— ANI (@ANI) November 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.