ನವದೆಹಲಿ: ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರ ಸಮ್ಮುಖದಲ್ಲಿ ಕಲ್ಲಿದ್ದಲು ಗಣಿಗಳ ಹರಾಜಿನ 6 ನೇ ಕಂತಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೀತಾರಾಮನ್ ಅವರು, ಭಾರತದಂತಹ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗೆ ಕಲ್ಲಿದ್ದಲು ಉತ್ಪಾದನೆ ಮತ್ತು ಅನಿಲೀಕರಣ ಯೋಜನೆಗಳಲ್ಲಿ ಹೆಚ್ಚಿನ ಹೂಡಿಕೆಯ ಅಗತ್ಯವಿದೆ. ಜಾಗತಿಕವಾಗಿ ಇಂಧನ ಬೆಲೆಗಳು, ವಿಶೇಷವಾಗಿ ಅನಿಲ ಬೆಲೆಗಳು ಏರುತ್ತಿದೆ ಎಂದು ಹೇಳಿದ್ದಾರೆ.
ಭಾರತವು ಪ್ರಸ್ತುತ ವಿಶ್ವದ ಅತ್ಯುತ್ತಮ ಹೂಡಿಕೆ ತಾಣವಾಗಿದೆ ಎಂದ ಅವರು, ಪ್ರಸ್ತುತ ಸರ್ಕಾರದ ನೀತಿ ಸ್ಥಿರತೆ ಮತ್ತು ಪಾರದರ್ಶಕ ಪ್ರಕ್ರಿಯೆಯಿಂದಾಗಿ ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಆಮದು ಶೇಕಡಾ 41 ರಷ್ಟು ಕಡಿಮೆಯಾಗಿದೆ. ಗಣಿಗಾರಿಕೆ ಕ್ಷೇತ್ರದ ಸುಧಾರಣೆಗಳು ದೇಶದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗೆ ಸರಿಯಾದ ಪೂರಕವನ್ನು ಒದಗಿಸುತ್ತಿವೆ ಎಂದು ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಲ್ಹಾದ್ ಜೋಶಿ ಅವರು, ಕಲ್ಲಿದ್ದಲಿನ ವರ್ಧಿತ ಬಳಕೆಗಾಗಿ ತಮ್ಮ ಸಚಿವಾಲಯವು ಪರ್ಯಾಯ ವಿಧಾನಗಳನ್ನು ಅನ್ವೇಷಿಸುತ್ತಿದೆ. ಕಲ್ಲಿದ್ದಲು ಅನಿಲೀಕರಣಕ್ಕೆ 6,000 ಕೋಟಿ ರೂಪಾಯಿ ಮತ್ತು ಅನ್ವೇಷಣೆಗೆ 250 ಕೋಟಿ ರೂಪಾಯಿ ಪ್ರೋತ್ಸಾಹಧನವನ್ನು ಹಣಕಾಸು ಸಚಿವಾಲಯ ವಿಸ್ತರಿಸಿದೆ ಎಂದು ಹೇಳಿದರು.
ಇಲ್ಲಿಯವರೆಗೆ ಕೈಗೊಂಡ ಅತಿ ದೊಡ್ಡ ಹರಾಜು ಇದಾಗಿದ್ದು, ಇಲ್ಲಿ 11 ರಾಜ್ಯಗಳಿಗೆ ಸಂಬಂಧಿಸಿದ 141 ಗಣಿಗಳನ್ನು ಹರಾಜು ಮಾಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ದೇಶದ ಬೆಳವಣಿಗೆಯೊಂದಿಗೆ ತಮ್ಮ ವ್ಯವಹಾರಗಳನ್ನು ಬೆಳೆಸಲು ಎಲ್ಲಾ ಬಿಡ್ದಾರರು ಹರಾಜಿನಲ್ಲಿ ಭಾಗವಹಿಸಬೇಕೆಂದು ಅವರು ಒತ್ತಾಯಿಸಿದರು.ರಡು ಹಂತದ ಪ್ರಕ್ರಿಯೆಯ ಮೂಲಕ ಆನ್ಲೈನ್ನಲ್ಲಿ ಹರಾಜು ನಡೆಯಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಜಾರ್ಖಂಡ್, ತೆಲಂಗಾಣ, ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಇದು ಸಂಬಂಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.