ತಿರುವನಂತಪುರಂ: ನಮ್ಮ ಸಮಾಜದಲ್ಲಿ ನಡೆಯುವ ಕೆಲವೊಂದು ಘಟನೆಗಳು ಮಾನವೀಯತೆ ಸತ್ತೇ ಹೋಗಿದೆ ಎಂದು ಯೋಚಿಸುವಂತೆ ಮಾಡುತ್ತದೆ. ಕೇರಳದ ಕಣ್ಣೂರಿನಲ್ಲಿ ಅಂತಹುದೇ ಒಂದು ಘಟನೆ ನಡೆದಿದೆ.
ರಾಜಸ್ಥಾನದ ಮೂಲದ ವಲಸೆ ಕಾರ್ಮಿಕರ ಪುಟ್ಟ ಬಾಲಕನೊಬ್ಬ ನಿಂತಿದ್ದ ಕಾರಿಗೆ ಒರಗಿದ್ದಾನೆ. ಇದನ್ನು ಕಂಡು ಕಾರಿನಿಂದ ಹೊರಬಂದ ಚಾಲಕ ಬಾಲಕನಿಗೆ ಬೈದು ಆತನ ಎದೆಗೆ ಒದಿದ್ದಾನೆ.
ಕಣ್ಣೂರಿನ ತಲಷೇರಿಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಬಾಲಕನನ್ನು ಅಮಾನವೀಯ ರೀತಿಯಲ್ಲಿ ಒದೆಯುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸರಿಯಾಗಿದೆ.
ಸುತ್ತಮುತ್ತಲಿನ ಜನರು ಈ ಘಟನೆಯನ್ನು ಕಂಡು ಚಾಲಕನ ಬಳಿ ಬಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿ ಆತನಿಗೆ ಪಾಠ ಕಲಿಸುವ ಪ್ರಯತ್ನ ಮಾಡಿದ್ದಾರೆ. ಮೊದಲಿಗೆ ಪೊಲೀಸರು ಕಾರಿನ ಮಾಲೀಕನಿಗೆ ಒಂದಿಷ್ಟು ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಆದರೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
God's Own County has become the Devil's Own Land under the @pinarayivijayan regime. A six-year-old Rajasthani boy was kicked and manhandled for leaning on a car. This inhuman incident happend in Thalassery, Kannur.@PrakashJavdekar @AgrawalRMD @BJP4India pic.twitter.com/R0m9nd1sFQ
— K Surendran (@surendranbjp) November 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.