ಜಮ್ಮು: ಎಎಪಿ ಮತ್ತು ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿಯ ಹಲವಾರು ಕಾರ್ಯಕರ್ತರು ಸೇರಿದಂತೆ 50 ಕ್ಕೂ ಹೆಚ್ಚು ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರು ಸೋಮವಾರ ಜಮ್ಮು ಮತ್ತು ಕಾಶ್ಮೀರದಲ್ಲಿಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಜಮ್ಮು ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡವರಲ್ಲಿ ಪ್ರಮುಖರೆಂದರೆ ಮಾಜಿ ಮುಖ್ಯ ವಿಜಿಲೆನ್ಸ್ ಅಧಿಕಾರಿ ಜೀತ್ ರಾಜ್ ಕಲ್ಸಿ, ನಿವೃತ್ತ ಕಾರ್ಯನಿರ್ವಾಹಕ ಇಂಜಿನಿಯರ್ ಆರ್ ಕೆ ಗುಪ್ತಾ, ವಕೀಲ ನೀರಜ್ ಗುಪ್ತಾ ಮತ್ತು ಎಎಪಿ ಪ್ರಾಂತೀಯ ಮಹಿಳಾ ಘಟಕದ ಅಧ್ಯಕ್ಷೆ ರಜನಿ ಜಮ್ವಾಲ್ ಮುಂತಾದವರು ಸೇರಿದ್ದಾರೆ.
”ಈ ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರು ಜಮ್ಮುವಿನ ವಿವಿಧ ಭಾಗಗಳಿಂದ ಬಂದಿರುವವರಾದ ಕಾರಣ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 50 ಪ್ಲಸ್ ಸ್ಥಾನಗಳೊಂದಿಗೆ ಪಕ್ಷದ ಧ್ಯೇಯವನ್ನು ಬಲಪಡಿಸಲಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನದೇ ಆದ ಸರ್ಕಾರವನ್ನು ರಚಿಸಲು ಬಿಜೆಪಿಗೆ ಸಹಾಯ ಮಾಡಲಿದ್ದಾರೆ” ಎಂದು ರೈನಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜನರನ್ನು ತಲುಪಲು ಮತ್ತು ಬಿಜೆಪಿ ನೇತೃತ್ವದ ಸರ್ಕಾರದ ನೀತಿಗಳನ್ನು ಎತ್ತಿ ಹಿಡಿಯಲು ಸಮರ್ಪಣಾ ಭಾವದಿಂದ ಕೆಲಸ ಮಾಡುವುದಾಗಿ ಬಿಜೆಪಿಗೆ ಸೇರ್ಪಡೆಗೊಂಡ ನಾಯಕರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಘೋಷಣೆಗೆ ಆಕರ್ಷಿತರಾಗಿ ದಿನನಿತ್ಯ ಹೆಚ್ಚಿನ ಸಂಖ್ಯೆಯ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ರೈನಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.