ನವದೆಹಲಿ: ರಾಜ್ಯದಲ್ಲಿ ಏಳು ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಚಾಮರಾಜನಗರ, ಹಾಸನ, ಕೊಡಗು, ಬೀದರ್, ಹಾವೇರಿ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಾಲಿ ಇರುವ ಸಂಪನ್ಮೂಲದಲ್ಲೇ ವಿನೂತನ ಮಾದರಿಯಲ್ಲಿ ಏಳು ಹೊಸ ವಿಶ್ವವಿದ್ಯಾಲಯದಗಳ ಸ್ಥಾಪನೆಗೆ ಸರ್ಕಾರ ಕೆಲ ಷರತ್ತುಬದ್ಧ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ.
ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ 2022ಕ್ಕೆ ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ನೀಡಲಾಗಿತ್ತು. ಅದರಂತೆ ಹೊಸ ವಿವಿಗಳ ರಚನೆಗೆ ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ.
ಇದರಂತೆ ಈ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಯಾವುದೇ ಜಮೀನು, ವಾಹನ ಅಥವಾ ಹೊಸ ಕಟ್ಟಡಗಳನ್ನು ಖರೀದಿಸುವಂತಿಲ್ಲ. ಈಗಾಗಲೇ ಮಾತೃ ವಿಶ್ವವಿದ್ಯಾಲಯಗಳಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಅವಶ್ಯ ಹುದ್ದೆಗಳನ್ನು ಬಳಸಿಕೊಂಡು ವಿಶ್ವವಿದ್ಯಾಲಯ ರಚನೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.