ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಸುಮಾರು 6 ಜನರು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೇಪಾಳದಲ್ಲಿ ಮಂಗಳವಾರ (ನ 8) ರಾತ್ರಿ 8.52ಕ್ಕೆ ಮೊದಲ ಬಾರಿಗೆ ಭೂಮಿಯು ಕಂಪಿಸಿದ ಅನುಭವವಾಯಿತು. ಮೊದಲ ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.9 ಎಂದು ದಾಖಲಾಗಿತ್ತು. ನಂತರ ನೇಪಾಳದ ಧೋತಿ ಜಿಲ್ಲೆಯಲ್ಲಿ ಬೆಳಗಿನ ಜಾವ 1:57ಕ್ಕೆ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಪಿಥೋರಗಢ್ನಿಂದ ಆಗ್ನೇಯಕ್ಕೆ ಸುಮಾರು 90 ಕಿಮೀ ದೂರದಲ್ಲಿರುವ ನೇಪಾಳದ ಡೈಲೇಖ್ ಭೂಕಂಪದ ಕೇಂದ್ರಬಿಂದುವಾಗಿದೆ.
ನೇಪಾಳದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಪ್ರದೇಶದಲ್ಲಿ ಹಲವಾರು ಸೆಕೆಂಡುಗಳ ಕಾಲ ಪ್ರಬಲವಾದ ಕಂಪನಗಳು ಸಂಭವಿಸಿದವು. ಇಂದು ಮುಂಜಾನೆ ದೆಹಲಿ, ನೋಯ್ಡಾ, ಗುರುಗ್ರಾಮ್ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಭೂಕಂಪನದ ಅನುಭವವನ್ನು ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಕೇವಲ ಅರ್ಧಗಂಟೆಯ ಅವಧಿಯಲ್ಲಿ ಟ್ವಿಟರ್ನಲ್ಲಿ #earthquake ಹ್ಯಾಷ್ಟ್ಯಾಗ್ ಟ್ರೆಂಡ್ ಇದೆ. ಭಾರತದಲ್ಲಿ ಭೂಕಂಪದಿಂದ ಜೀವಹಾನಿ ಅಥವಾ ಆಸ್ತಿಹಾನಿಯಾದ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Earthquake of Magnitude:4.3, Occurred on 09-11-2022, 06:27:13 IST, Lat: 29.87 & Long: 80.49, Depth: 5 Km ,Location:Pithoragarh, Uttarakhand, India for more information download the BhooKamp App https://t.co/sqJqVcicEU @Indiametdept @ndmaindia @moesgoi @Dr_Mishra1966 @PMOIndia pic.twitter.com/4OnA0HmHDJ
— National Center for Seismology (@NCS_Earthquake) November 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.