ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ನಾಡಪಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಗೊಂಡಿದೆ.
ಮೊದಲ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯನ್ನು ಪ್ರತಿಮೆ ಪಡೆದುಕೊಂಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ “ಪ್ರಗತಿಯ ಪ್ರತಿಮೆ”ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದಿದ್ದಾರೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ “ಪ್ರಗತಿಯ ಪ್ರತಿಮೆ”ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.#ಪ್ರಗತಿಯಪ್ರತಿಮೆ #ಬನ್ನಿನಾಡಕಟ್ಟೋಣ pic.twitter.com/sFERth0Xwv
— Basavaraj S Bommai (@BSBommai) November 9, 2022
ಸಚಿವರಾದ ಡಾ. ಅಶ್ವತ್ಥ್ ನಾರಾಯಣ ಅವರು, ಪ್ರಗತಿಯ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಮಾಡಿರುವುದು ಹೆಮ್ಮೆ ಮತ್ತು ಗೌರವದ ಕ್ಷಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
With great honour and pride, we announce that the 𝐒𝐭𝐚𝐭𝐮𝐞 𝐨𝐟 𝐏𝐫𝐨𝐬𝐩𝐞𝐫𝐢𝐭𝐲 – ಪ್ರಗತಿಯ ಪ್ರತಿಮೆ has officially been declared as the First and Tallest Bronze Statue of a Founder of a City by the World Book of Records.#StatueOfProsperity #ಪ್ರಗತಿಯಪ್ರತಿಮೆ #ಬನ್ನಿನಾಡಕಟ್ಟೋಣ pic.twitter.com/etSNRYoZS1
— Dr. Ashwathnarayan C. N. (@drashwathcn) November 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.