ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿ, ಸಂಘನಿಕೇತನದ ವತಿಯಿಂದ ಕನ್ನಡ ಮಾಧ್ಯಮ ಕಲಿಯುತ್ತಿರುವ ಮಕ್ಕಳಿಗಾಗಿ “ಕನ್ನಡ ಶಾಲಾ ಮಕ್ಕಳ ಹಬ್ಬ” ಎಂಬ ಕಾರ್ಯಕ್ರಮವನ್ನು ನವೆಂಬರ್ 19 ಮತ್ತು 20ರಂದು ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕನ್ನಡ ಶಾಲೆಯಲ್ಲಿ ಕಲಿತು ವಿಶೇಷ ಸಾಧನೆ ಮಾಡಿದ ಸಾಧಕರು ಭಾಗವಹಿಸಲಿದ್ದಾರೆ. ಜೊತೆಗೆ ಕನ್ನಡದ ಬಗೆಗಿನ ಪ್ರದರ್ಶಿನಿಗಳು, ವಿಶೇಷ ಸ್ಪರ್ಧೆಗಳು, ಗೋಷ್ಠಿಗಳು ನಡೆಯಲಿದೆ. ಹಬ್ಬದ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ.
ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಯ ಶಾಲೆಗಳ ಮಕ್ಕಳು ನವೆಂಬರ್ 20ರ ಭಾನುವಾರದಂದು ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ನವೆಂಬರ್ 19ರಂದು ಪುತ್ತೂರು, ಸುಳ್ಯ. ಬೆಳ್ತಂಗಡಿ ತಾಲೂಕಿನ ಮಕ್ಕಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 5ನೇ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು, ಕನ್ನಡ ಶಾಲೆಯ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರು, ನವ ದಂಪತಿಗಳು ಹಾಗೂ 1ರಿಂದ 4ನೇ ತರಗತಿವರೆಗಿನ ಮಕ್ಕಳ ಪೋಷಕರು ಭಾಗವಹಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.