ಬೆಂಗಳೂರು: ಜನವರಿ 1ರಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಿಪಿಎಲ್ ಕಾರ್ಡುದಾರರಿಗೆ ಕುಚಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಪ್ರಕಟಿಸಿದ್ದಾರೆ.
ಮೂರು ಜಿಲ್ಲೆಗಳಿಗೆ ಒಟ್ಟು 13 ಲಕ್ಷ ಕ್ವಿಂಟಾಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 1ರಿಂದಲೇ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಕೇಂದ್ರ ತೆರೆಯಲಾಗುತ್ತದೆ. 2540 ರೂಪಾಯಿ ಬೆಂಬಲ ಬೆಲೆ ನೀಡಿ ಭತ್ತ ಖರೀದಿಸಿ ಸ್ಥಳೀಯವಾಗಿ ಸಂಸ್ಕರಿಸಲು ನಿರ್ಧರಿಸಲಾಗಿದೆ. ಕೆಂಪು ಕುಚಲಕ್ಕಿಯ ಭತ್ತವನ್ನೇ ಖರೀದಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
5 ಕಿಲೋ ಅಕ್ಕಿಯನ್ನು ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿನ ಕುಚಲಕ್ಕಿಯ ಭತ್ತ ವರ್ಷ ಪೂರ್ತಿ ಸಿಗುವುದು ಕಷ್ಟ ಹೀಗಾಗಿ ಬೇರೆ ರಾಜ್ಯಗಳಿಂದ ಖರೀದಿ ಮಾಡಲು ಕೇಂದ್ರ ಸರಕಾರ ಅನುಮತಿ ನೀಡಿದೆ ಎಂದಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.