ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.
ಇದೆ ವೇಳೆ ಮೋದಿ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಿದರು. ಕಾಶಿಯಾತ್ರೆ ಗೆಂದು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ಭಾರತ ಗೌರವ ಕಾಶಿ ದರ್ಶನ್ ರೈಲು ಇದಾಗಿದ್ದು, ರಾಜ್ಯದ ಜನತೆಯ ಕಾಶಿ ಯಾತ್ರೆ ಕನಸನ್ನು ನನಸಾಗಿಸಲಿದೆ.
ಇದಕ್ಕೂ ಮುನ್ನ ಶಾಸಕರ ಭವನದ ಆವರಣದಲ್ಲಿರುವ ಸಂತ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಮೋದಿ ಪುಷ್ಪಾರ್ಚನೆ ಮಾಡಿದರು.
ಶಾಸಕರ ಭವನದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲು ತೆರಳುವ ಮಾರ್ಗದಲ್ಲಿ ಸಾಲುಗಟ್ಟಿ ನಿಂತಿದ್ದ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕೈ ಬೀಸಿದರು.
Karnataka | Prime Minister Narendra Modi flags off Vande Bharat Express at KSR railway station in Bengaluru. pic.twitter.com/wtkwR3Uv69
— ANI (@ANI) November 11, 2022
Karnataka | Prime Minister Narendra Modi flags off Bharat Gaurav Kashi Darshana Train at KSR railway station in Bengaluru.
(Source: DD) pic.twitter.com/qFdukr7JRJ
— ANI (@ANI) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.