ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಪ್ರಧಾನಮಂತ್ರಿಯವರು ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಆರು ಪಥದ ಗ್ರೀನ್ಫೀಲ್ಡ್ ರಾಯ್ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್ನ ಆಂಧ್ರಪ್ರದೇಶ ವಿಭಾಗದ ಅಡಿಗಲ್ಲು ಹಾಕಲಿದ್ದಾರೆ. 3750 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ.
2900 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಆಂಧ್ರಪ್ರದೇಶದ ONGC ಯ ಯು-ಫೀಲ್ಡ್ ಆನ್ಶೋರ್ ಡೀಪ್ ವಾಟರ್ ಬ್ಲಾಕ್ ಯೋಜನೆಯನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸುಮಾರು 6.65 MMSCMD ಸಾಮರ್ಥ್ಯದ GAIL ನ ಶ್ರೀಕಾಕುಳಂ ಅಂಗುಲ್ ನೈಸರ್ಗಿಕ ಅನಿಲ ಪೈಪ್ಲೈನ್ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಲಿರುವ ವಿಶಾಖಪಟ್ಟಣ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶ್ರೀ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪುನರಾಭಿವೃದ್ಧಿಗೊಂಡ ನಿಲ್ದಾಣವು ದಿನಕ್ಕೆ 75,000 ಪ್ರಯಾಣಿಕರನ್ನು ಪೂರೈಸುತ್ತದೆ ಮತ್ತು ಆಧುನಿಕ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಯಾಣಿಕರ ಅನುಭವವನ್ನು ಸುಧಾರಿಸುತ್ತದೆ.
ಪ್ರಧಾನಮಂತ್ರಿಯವರು ವಿಶಾಖಪಟ್ಟಣಂ ಮೀನುಗಾರಿಕೆ ಬಂದರಿನ ಆಧುನೀಕರಣ ಮತ್ತು ಮೇಲ್ದರ್ಜೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಯೋಜನೆಯ ಒಟ್ಟು ವೆಚ್ಚ ಸುಮಾರು 150 ಕೋಟಿ ರೂಪಾಯಿಗಳು.
ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನಿಯವರು ತೆಲಂಗಾಣದ ರಾಮಗುಂಡಂನಲ್ಲಿರುವ ರಾಮಗುಂಡಂ ಫರ್ಟಿಲೈಸರ್ಸ್ ಅಂಡ್ ಕೆಮಿಕಲ್ಸ್ ಲಿಮಿಟೆಡ್ (RFCL) ಸ್ಥಾವರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ರಾಮಗುಂಡಂನಲ್ಲಿ 9,500 ಕೋಟಿಗೂ ಹೆಚ್ಚು ಮೌಲ್ಯದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ರಾಮಗುಂಡಂನಲ್ಲಿರುವ ರಸಗೊಬ್ಬರ ಘಟಕವನ್ನು ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ. ರಾಮಗುಂಡಂ ಯೋಜನೆಗೆ 2016 ರ ಆಗಸ್ಟ್ 7 ರಂದು ಪ್ರಧಾನ ಮಂತ್ರಿಯವರು ಶಂಕುಸ್ಥಾಪನೆ ಮಾಡಿದ್ದರು.
ಸುಮಾರು 1000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭದ್ರಾಚಲಂ ರಸ್ತೆ-ಸತ್ತುಪಲ್ಲಿ ರೈಲು ಮಾರ್ಗವನ್ನು ಪ್ರಧಾನಿಯವರು ದೇಶಕ್ಕೆ ಸಮರ್ಪಿಸಲಿದ್ದಾರೆ. 2200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ರಸ್ತೆ ಯೋಜನೆಗಳ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಲಿದ್ದಾರೆ. ಅವುಗಳೆಂದರೆ NH-765DG ಯ ಮೇದಕ್-ಸಿದ್ದಿಪೇಟ್-ಎಲ್ಕತುರ್ಥಿ ವಿಭಾಗ, NH-161BB ಯ ಬೋಧನ್-ಬಾಸರ್-ಭೈಂಸಾ ವಿಭಾಗ ಮತ್ತು NH-353C ಯ ಸಿರೊಂಚಾದಿಂದ ಮಹದೇವಪುರ ವಿಭಾಗವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.