ಬೆಂಗಳೂರು : ಪದ್ಮಶ್ರೀ ಪುರಸ್ಕೃತರಾದ ವೇದ ವಿದ್ವಾನ್ ಪ್ರೊ. ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ʼಶ್ರೀ ಆರ್.ಎಲ್.ಕಶ್ಯಪ್ ಅವರು ಬಹುಮುಖ ವ್ಯಕ್ತಿತ್ವದವರು ಮತ್ತು ಶ್ರೇಷ್ಠ ವಿದ್ವಾಂಸರು. ಅವರಿಗೆ ಗಣಿತ ಮತ್ತು ವೈಜ್ಞಾನಿಕ ಜ್ಞಾನ ಶ್ರೀಮಂತಿಕೆಯ ಅನುಗ್ರಹವಿತ್ತು. ಅವರು ಭಾರತದ ಸಾಂಸ್ಕೃತಿಕ ಬೇರುಗಳ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದರು ಮತ್ತು ವೈದಿಕ ಅಧ್ಯಯನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ.ʼ ಎಂದು ಕನ್ನಡದಲ್ಲೂ ಟ್ವೀಟ್ ಮಾಡಿದ್ದಾರೆ.
ಶ್ರೀ ಆರ್.ಎಲ್.ಕಶ್ಯಪ್ ಅವರು ಬಹುಮುಖ ವ್ಯಕ್ತಿತ್ವದವರು ಮತ್ತು ಶ್ರೇಷ್ಠ ವಿದ್ವಾಂಸರು. ಅವರಿಗೆ ಗಣಿತ ಮತ್ತು ವೈಜ್ಞಾನಿಕ ಜ್ಞಾನ ಶ್ರೀಮಂತಿಕೆಯ ಅನುಗ್ರಹವಿತ್ತು. ಅವರು ಭಾರತದ ಸಾಂಸ್ಕೃತಿಕ ಬೇರುಗಳ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದರು ಮತ್ತು ವೈದಿಕ ಅಧ್ಯಯನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. pic.twitter.com/viw1F8QKH5
— Narendra Modi (@narendramodi) November 12, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಆರ್ ಎಲ್ ಕಶ್ಯಪ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ʻಸಾಕ್ಷಿ ಸಂಸ್ಥೆಯ ಸಂಸ್ಥಾಪಕರು ಹಾಗೂ 25 ಸಾವಿರ ಮಂತ್ರಗಳನ್ನು ಆಂಗ್ಲ ಭಾಷೆಗೆ ಅನುವಾದಿಸಿ, 50ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಪದ್ಮಶ್ರೀ ಶ್ರೀ ಆರ್. ಎಲ್. ಕಶ್ಯಪ್ ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃʼ ಎಂದು ಟ್ವೀಟ್ ಮಾಡಿದ್ದಾರೆ.
ಸಾಕ್ಷಿ ಸಂಸ್ಥೆಯ ಸಂಸ್ಥಾಪಕರು ಹಾಗೂ 25 ಸಾವಿರ ಮಂತ್ರಗಳನ್ನು ಆಂಗ್ಲ ಭಾಷೆಗೆ ಅನುವಾದಿಸಿ, 50ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಪದ್ಮಶ್ರೀ ಶ್ರೀ ಆರ್. ಎಲ್. ಕಶ್ಯಪ್ ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/IzDFasuW20
— Basavaraj S Bommai (@BSBommai) November 11, 2022
85 ವರ್ಷವಾಗಿರುವ ಕಶ್ಯಪ್ ಅವರು ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು.
ಸಾಕ್ಷಿ ಟ್ರಸ್ಟ್ ಸ್ಥಾಪಿಸಿ ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಕಶ್ಯಪ್ ಅವರಿಗೆ ಕೇಂದ್ರ ಸರ್ಕಾರ 2021 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. ವೇದಗಳನ್ನು ಇಂಗ್ಲೀಷ್ಗೆ ಅನುವಾದ ಮಾಡಿ, ವೇದಗಳ ಮೇಲೆ ಅನೇಕ ಸಂಶೋಧನಾ ಲೇಖನ ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.