ನವದೆಹಲಿ: ಪ್ರಸ್ತುತ ಖಾರಿಫ್ ಮಾರ್ಕೆಟಿಂಗ್ ಸೀಸನ್ನಲ್ಲಿ 47,644 ಕೋಟಿ ರೂಪಾಯಿಗಳ ಎಂಎಸ್ಪಿ ಮೌಲ್ಯದೊಂದಿಗೆ ನಡೆದ ಖರೀದಿ ಕಾರ್ಯಾಚರಣೆಗಳಿಂದಾಗಿ 13 ಲಕ್ಷ 50 ಸಾವಿರಕ್ಕೂ ಹೆಚ್ಚು ರೈತರು ಈಗಾಗಲೇ ಪ್ರಯೋಜನ ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ.
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಈ ಬಗ್ಗೆ ಹೇಳಿಕೆ ನೀಡಿದ್ದು, 2022-23 ರ ಖಾರಿಫ್ ಮಾರ್ಕೆಟಿಂಗ್ ಸೀಸನ್ಗಾಗಿ ಭತ್ತ ಖರೀದಿಯು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಗಮವಾಗಿ ಪ್ರಗತಿಯಲ್ಲಿದೆ ಎಂದು ತಿಳಿಸಿದೆ. ಅವುಗಳಲ್ಲಿ ಪಂಜಾಬ್, ಛತ್ತೀಸ್ಗಢ, ಉತ್ತರಾಖಂಡ, ಹಿಮಾಚಲ ಪ್ರದೇಶ, ಬಿಹಾರ, ಉತ್ತರ ಪ್ರದೇಶ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ತೆಲಂಗಾಣ, ಹರಿಯಾಣ ಮತ್ತು ತಮಿಳುನಾಡು ಸೇರಿವೆ.
ನವೆಂಬರ್ 10 ರವರೆಗೆ 231 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಲಾಗಿದೆ, ಹಿಂದಿನ ವರ್ಷದ ಇದೇ ಅವಧಿಯಲ್ಲಿ ಸುಮಾರು 228 ಲಕ್ಷ ಮೆಟ್ರಿಕ್ ಟನ್ ಖರೀದಿಯಾಗಿದೆ. ದೇಶದಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದು, ಭತ್ತದ ಉತ್ಪಾದನೆಯು ಸಾಮಾನ್ಯ ಸ್ಥಿತಿಯಲ್ಲಿರುವ ನಿರೀಕ್ಷೆಯಿದೆ ಎಂದು ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಅಗತ್ಯತೆಗಳನ್ನು ಪೂರೈಸಲು ಕೇಂದ್ರದ ಅಡಿಯಲ್ಲಿ ಸಾಕಷ್ಟು ಆಹಾರ ಧಾನ್ಯಗಳ ದಾಸ್ತಾನು ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ. ಇತರ ರಾಜ್ಯಗಳಲ್ಲಿಯೂ ಖರೀದಿಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಮತ್ತು ಅಡೆತಡೆ ಮುಕ್ತ ಖರೀದಿ ಕಾರ್ಯಾಚರಣೆಗೆ ಎಲ್ಲಾ ವ್ಯವಸ್ಥೆಗಳು ಜಾರಿಯಲ್ಲಿವೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.