ನಂದಿಗ್ರಾಮ: ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದು, ರಾಜಕೀಯ ಸನ್ನಿವೇಶ ಎಷ್ಟರ ಮಟ್ಟಿಗೆ ಕೆಳಮಟ್ಟಕ್ಕೆ ತಲುಪಿದೆ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ.
ಅವರ ಹೇಳಿಕೆಯ ವೀಡಿಯೊ ಕ್ಲಿಪ್ ವೈರಲ್ ಆದ ನಂತರ, ಪಶ್ಚಿಮ ಬಂಗಾಳದ ಸಚಿವ ಅಖಿಲ್ ಗಿರಿ ಅವರು ಮುರ್ಮು ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿದ್ದಾರೆ.
ಬಳಿಕ ಎಚ್ಚೆತ್ತ ಗಿರಿ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.
ವೈರಲ್ ವೀಡಿಯೊದಲ್ಲಿ, ಗಿರಿ ಅವರು ಮುರ್ಮು ಅವರ ಬಾಹ್ಯ ನೋಟದ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
“ಅವರು (ಸುವೇಂದು ಅಧಿಕಾರಿ) ನಾನು ಸುಂದರವಾಗಿಲ್ಲ ಎಂದು ಹೇಳುತ್ತಾರೆ. ನೀವು ಎಷ್ಟು ಸುಂದರವಾಗಿದ್ದೀರಿ! ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪಯಿ ಹೇಗೆ ಕಾಣುತ್ತಾರೆ?” ನಂದಿಗ್ರಾಮದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಸುವೆಂದು ಅಧಿಕಾರಿಯನ್ನು ಟೀಕಿಸುವ ಭರದಲ್ಲಿ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದಾರೆ.
ಮುರ್ಮು ಬುಡಕಟ್ಟು ಸಮುದಾಯದಿಂದ ಬಂದವರು. ಅವರು ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿ ಮತ್ತು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ.
ಬಂಗಾಳ ಸಚಿವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವನ್ನು ಬುಡಕಟ್ಟು ವಿರೋಧಿ ಎಂದು ಕರೆದಿದೆ.
I respect President. I mentioned the post&made a comparison to respond to Suvendu Adhikari,I didn't take any name. He had said Akhil Giri looks bad in his appearance. I'm a min,took oath to office. If something is said against me, it's an insult to Constitution: WB Min Akhil Giri pic.twitter.com/9w1oY2BuZA
— ANI (@ANI) November 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.