ನವದೆಹಲಿ: ಬಂದೂಕು ಸಂಸ್ಕೃತಿಯನ್ನು ಹತ್ತಿಕ್ಕುವ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಪರಿಶೀಲನೆಗೊಳಪಡಿಸಲು ಆದೇಶ ಹೊರಡಿಸಿದೆ.
ಶಾಂತಿ, ನೆಮ್ಮದಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರಗಳ ಬಳಕೆಯನ್ನು ನಿರುತ್ಸಾಹಗೊಳಿಸುವಂತೆ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನದ ನಂತರ ಲೈಸೆನ್ಸ್ ಪರಿಶೀಲನೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಗೃಹ ಪ್ರಧಾನ ಕಾರ್ಯದರ್ಶಿ ಅವರು ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರಾಜ್ಯದಲ್ಲಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಪರಿಶೀಲಿಸುವಂತೆ ವಿವರವಾದ ಪತ್ರವನ್ನು ಬರೆದಿದ್ದಾರೆ.
ಯಾವುದೇ ಸಮಾಜಘಾತುಕರಿಗೆ ಈಗಾಗಲೇ ಪರವಾನಗಿ ನೀಡಿದ್ದರೆ ಕೂಡಲೇ ರದ್ದುಪಡಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅದೇ ರೀತಿ, ಮುಂಬರುವ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಯಾವುದೇ ಹೊಸ ಪರವಾನಗಿಯನ್ನು ನೀಡಬಾರದು ಮತ್ತು ಹೆಚ್ಚು ಮತ್ತು ನಿಜವಾಗಿಯೂ ಅಗತ್ಯವಿರುವವರಿಗೆ ಮಾತ್ರ ಪರವಾನಗಿಯನ್ನು ನೀಡಬೇಕು ಎಂದು ಆದೇಶಿಸಲಾಗಿದೆ.
ಅಂತೆಯೇ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಾರ್ವಜನಿಕ ಪ್ರದರ್ಶನದ ಮೇಲೆ ನಿಷೇಧ ಹೇರಲು ಆದೇಶಿಸಲಾಗಿದೆ. ಈ ನಿಷೇಧವು ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಗೂ ಅನ್ವಯಿಸುತ್ತದೆ.
ಅದೇ ರೀತಿ ಬಂದೂಕು ಸಂಸ್ಕೃತಿಯನ್ನು ಸಾರುವ ಹಾಡುಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಅಂತೆಯೇ, ಸಾರ್ವಜನಿಕ ಸಭೆಗಳು, ಧಾರ್ಮಿಕ ಸ್ಥಳಗಳು, ಮದುವೆಗಳು, ಪಾರ್ಟಿಗಳು ಮತ್ತು ಇತರ ಸ್ಥಳಗಳಲ್ಲಿ ಶಸ್ತ್ರಾಸ್ತ್ರಗಳನ್ನು ಒಯ್ಯುವುದು ಮತ್ತು ಪ್ರದರ್ಶಿಸುವುದನ್ನು ನಿಷೇಧಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.