ರಾಂಚಿ: ಇಂದು ಜಾರ್ಖಂಡ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌರವ ಸಲ್ಲಿಸಿದರು.
ರಾಷ್ಟ್ರಪತಿಯಾದ ನಂತರ ಜಾರ್ಖಂಡ್ಗೆ ಮೊದಲ ಬಾರಿಗೆ ಭೇಟಿ ನೀಡಿದ ಮುರ್ಮು ಅವರು, ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಜಾರ್ಖಂಡ್ನ ಉಲಿಹತು ಗ್ರಾಮಕ್ಕೆ ತೆರಳಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು.
ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮತ್ತು ಸಿಎಂ ಹೇಮಂತ್ ಸೊರೆನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಟ್ವೀಟ್ ಮಾಡಿದ ರಾಷ್ಟ್ರಪತಿಗಳು, “ಜನಜಾತಿಯ ಗೌರವ್ ದಿವಸ್ ಅಂಗವಾಗಿ ನಾಗರಿಕರಿಗೆ, ವಿಶೇಷವಾಗಿ ಬುಡಕಟ್ಟು ಸಮಾಜದ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳು! ಬುಡಕಟ್ಟು ಸಮುದಾಯಗಳು ತಮ್ಮ ಕಲೆ, ಕರಕುಶಲ ಮತ್ತು ಕಠಿಣ ಪರಿಶ್ರಮದಿಂದ ರಾಷ್ಟ್ರದ ಜೀವನವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಜೀವನಶೈಲಿಯು ಪ್ರಕೃತಿಯನ್ನು ಪೋಷಿಸುವಲ್ಲಿ ಜಗತ್ತಿಗೆ ಪಾಠಗಳನ್ನು ನೀಡುತ್ತದೆ” ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, “ಬುಡಕಟ್ಟು ಸಮುದಾಯಗಳು ಸ್ವಾತಂತ್ರ್ಯ ಹೋರಾಟಕ್ಕೆ ಉತ್ತಮ ಕೊಡುಗೆಗಳನ್ನು ನೀಡಿವೆ. ನಾನು ಎಲ್ಲಾ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ತೆರೆರೆ ವೀರರಿಗೆ ನಮಸ್ಕರಿಸುತ್ತೇನೆ. ಸ್ವಾತಂತ್ರ್ಯದ ನಂತರ ರಾಷ್ಟ್ರದ ಪ್ರಯಾಣಕ್ಕೆ ಬುಡಕಟ್ಟು ಜನರ ಕೊಡುಗೆ ಮಹತ್ವದ್ದಾಗಿದೆ. ಅವರ ಅಭಿವೃದ್ಧಿ ಮತ್ತು ಸಮೃದ್ಧಿಗೆ ನನ್ನ ಹಾರೈಕೆಗಳು” ಎಂದಿದ್ದಾರೆ
ರಾಷ್ಟ್ರಪತಿ ಮುರ್ಮು ಅವರನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮತ್ತು ಸಿಎಂ ಹೇಮಂತ್ ಸೊರೆನ್ ಅವರು ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಮುರ್ಮು ಅವರು ಜಾರ್ಖಾಂಡ್ನಿಂದ ಮಧ್ಯಪ್ರದೇಶಕ್ಕೆ ಎರಡು ದಿನಗಳ ಭೇಟಿಗಾಗಿ ಶೀಘ್ರದಲ್ಲೇ ತೆರಳಲಿದ್ದಾರೆ. ಅಲ್ಲಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಶಾಹದೋಲ್ನ ಲಾಲ್ಪುರದಲ್ಲಿ ಬುಡಕಟ್ಟು ಗೌರವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಪೆಸಾ ಕಾಯ್ದೆಯ ಅನುಷ್ಠಾನದ ಅಧ್ಯಕ್ಷತೆಯನ್ನು ರಾಷ್ಟ್ರಪತಿಗಳು ವಹಿಸಲಿದ್ದಾರೆ.
ಅವರು ಸಂಜೆ ಭೋಪಾಲ್ನಿಂದ ಎರಡು ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.
ಅಧ್ಯಕ್ಷರು ನವೆಂಬರ್ 16 ರಂದು ಭೋಪಾಲ್ನ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ಮಹಿಳಾ ಸ್ವ-ಸಹಾಯ ಗುಂಪು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.