ಲಕ್ನೋ: ಉತ್ತರಪ್ರದೇಶ ರಾಜ್ಯದಲ್ಲಿ ಮದರಸಾಗಳ ಸಮೀಕ್ಷೆ ಮಂಗಳವಾರ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸರ್ಕಾರದೊಂದಿಗೆ ಸಭೆ ನಡೆಸಲಾಗುವುದು ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.
ಉತ್ತರಪ್ರದೇಶದ ಎಲ್ಲಾ ಜಿಲ್ಲೆಗಳ ಮದರಸಾಗಳ ಸಮೀಕ್ಷೆ ಇಂದು ಮುಕ್ತಾಯವಾಗಿದ್ದು, ಉಳಿದ 15 ಜಿಲ್ಲೆಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶೀಘ್ರ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಧರ್ಮಪಾಲ್ ಸಿಂಗ್ ಹೇಳಿದ್ದಾರೆ.
ಕಾನೂನು ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿರುವ ಮದರಸಾಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ ಎಂದಿದ್ದಾರೆ.
“ರಾಜ್ಯದಲ್ಲಿ ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ನಡೆಯುತ್ತಿರುವ ಮದರಸಾಗಳ ಬಗ್ಗೆ ನಾವು ವಿಶೇಷ ಗಮನ ನೀಡಿದ್ದೇವೆ ಮತ್ತು ಈಗ ನಾವು ಮುಂದಿನ ನಡೆಯನ್ನು ನಿರ್ಧರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
“ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ಸಮೀಕ್ಷೆಯ ಡೇಟಾವನ್ನು ನವೆಂಬರ್ 15, 2022 ರೊಳಗೆ ಸರ್ಕಾರಕ್ಕೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಕೆಲವು ವರದಿಗಳು ಬರದ ಕಾರಣ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ” ಎಂದಿದ್ದಾರೆ.
ಈ ನಿಗದಿತ ಅವಧಿಯೊಳಗೆ ಪ್ರತಿ ಹಂತದಲ್ಲೂ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.
ಸಮೀಕ್ಷೆ ನಡೆಸಿದ ನಂತರ, ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಅವರಿಗೆ ವರದಿಯನ್ನು ಹಸ್ತಾಂತರಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.