ಬಾಲಿ: 21ನೇ ಶತಮಾನದಲ್ಲಿ ಭಾರತ ವಿಶ್ವಕ್ಕೆ ಭರವಸೆಯ ಕಿರಣವಾಗಿದೆ. ಭಾರತವು ಇಂದು ಅಭೂತಪೂರ್ವ ವೇಗ ಮತ್ತು ಪ್ರಮಾಣದಲ್ಲಿ ಚಲಿಸುತ್ತಿದೆ ಮತ್ತು ದೇಶದ ಪ್ರತಿಭೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಉದ್ಯಮಗಳು ವಿಶ್ವದಲ್ಲಿ ಮಹತ್ವದ ಛಾಪು ಮೂಡಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಿನ್ನೆ ಇಂಡೋನೇಷ್ಯಾದ ಬಾಲಿಯಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೇಶವು ಔಷಧಿಗಳು ಮತ್ತು ಲಸಿಕೆಗಳಲ್ಲಿ ಸ್ವಾವಲಂಬನೆ ಸಾಧಿಸಿರುವುದು ಜಗತ್ತಿಗೆ ಪ್ರಯೋಜನವನ್ನು ತಂದಿದೆ ಎಂದರು.
ಇಂಡೋನೇಷ್ಯಾದೊಂದಿಗೆ ನಿಕಟ ಸಾಂಸ್ಕೃತಿಕ ಸಂಬಂಧಗಳ ಕುರಿತು ಮಾತನಾಡಿದ ಮೋದಿ, ಭಾರತ ಮತ್ತು ಇಂಡೋನೇಷ್ಯಾ ಹಂಚಿಕೆಯ ಪರಂಪರೆ ಮತ್ತು ಸಂಸ್ಕೃತಿಯಿಂದ ಸಂಪರ್ಕ ಹೊಂದಿವೆ ಭಾರತ ಮತ್ತು ಇಂಡೋನೇಷ್ಯಾ ನಡುವೆ ತುಂಬಾ ಸಾಮ್ಯತೆ ಇದೆ ಎಂದರು.
ಬಾಲಿಯಿಂದ 1500 ಕಿಲೋಮೀಟರ್ ದೂರದಲ್ಲಿರುವ ಒಡಿಶಾದ ಕಟಕ್ನಲ್ಲಿ ಬಲಿ ಜಾತ್ರಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ಮಹೋತ್ಸವವು ಸಾವಿರಾರು ವರ್ಷಗಳ ಭಾರತ-ಇಂಡೋನೇಷ್ಯಾ ವ್ಯಾಪಾರ ಸಂಬಂಧಗಳನ್ನು ಆಚರಿಸುತ್ತದೆ ಎಂದು ಅವರು ಹೇಳಿದರು.
ಭಾರತದಲ್ಲಿ ಭವ್ಯವಾದ ರಾಮಮಂದಿರವು ರೂಪುಗೊಳ್ಳುತ್ತಿರುವ ಸಮಯದಲ್ಲಿ, ಭಾರತವು ಇಂಡೋನೇಷ್ಯಾದ ರಾಮಾಯಣ ಪರಂಪರೆಯನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು.
ಸವಾಲಿನ ಸಮಯದಲ್ಲಿ ಭಾರತವು ಇಂಡೋನೇಷ್ಯಾದೊಂದಿಗೆ ದೃಢವಾಗಿ ನಿಂತಿದೆ. 2018 ರಲ್ಲಿ ಇಂಡೋನೇಷ್ಯಾದಲ್ಲಿ ದೊಡ್ಡ ಭೂಕಂಪ ಸಂಭವಿಸಿದಾಗ ಭಾರತವು ಆಪರೇಷನ್ ಸಮುದ್ರ ಮೈತ್ರಿಯನ್ನು ಪ್ರಾರಂಭಿಸಿತ್ತು ಎಂದು ಅವರು ಹೇಳಿದರು.
ಇಂಡೋನೇಷ್ಯಾದ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಕೊಡುಗೆಯ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಭಾರತೀಯ ವಲಸೆಗಾರರ ಸಾಧನೆಗಳು ದೇಶವನ್ನು ಹೆಮ್ಮೆಪಡುವಂತೆ ಮಾಡುತ್ತವೆ. ಇಂಡೋನೇಷ್ಯಾದ ಅಭಿವೃದ್ಧಿ ಮತ್ತು ಸಮೃದ್ಧಿಯಲ್ಲಿ ಭಾರತೀಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.