ನವದೆಹಲಿ: ದಶಕಗಳಿಂದ ಭಯೋತ್ಪಾದನೆ ವಿವಿಧ ರೂಪಗಳಲ್ಲಿ ಭಾರತವನ್ನು ಘಾಸಿಗೊಳಿಸಲು ಪ್ರಯತ್ನಿಸಿದೆ ಆದರೆ ದೇಶವು ಭಯೋತ್ಪಾದನೆಯ ವಿರುದ್ಧ ಧೈರ್ಯದಿಂದ ಹೋರಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಅವರು ಇಂದು ನವದೆಹಲಿಯಲ್ಲಿ ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತ ಸಚಿವರ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ
“ಈ ಸಮ್ಮೇಳನವು ಭಾರತದಲ್ಲಿ ನಡೆಯುತ್ತಿರುವುದು ಮಹತ್ವದ್ದಾಗಿದೆ. ಜಗತ್ತು ಉಗ್ರವಾದವನ್ನು ಗಂಭೀರವಾಗಿ ಪರಿಗಣಿಸುವ ಮೊದಲೇ ಭಾರತವು ಭಯೋತ್ಪಾದನೆಯ ಭೀಕರತೆಯನ್ನು ಎದುರಿಸಿದೆ. ದಶಕಗಳಲ್ಲಿ, ಭಯೋತ್ಪಾದನೆಯು ಭಾರತವನ್ನು ಘಾಸಿಗೊಳಿಸಲು ವಿವಿಧ ರೂಪಗಳಲ್ಲಿ ಪ್ರಯತ್ನಿಸಿತು ಆದರೆ ನಾವು ಭಯೋತ್ಪಾದನೆಯನ್ನು ಧೈರ್ಯದಿಂದ ಎದುರಿಸಿದ್ದೇವೆ” ಎಂದಿದ್ದಾರೆ.
“ಎಲ್ಲಾ ಭಯೋತ್ಪಾದಕ ದಾಳಿಗಳು ಸಮಾನ ಆಕ್ರೋಶ ಮತ್ತು ಕ್ರಮಕ್ಕೆ ಅರ್ಹವಾಗಿವೆ” ಎಂದು ಹೇಳಿದ್ದಾರೆ.
ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೆಸೆಯಲು ಕರೆ ನೀಡಿದ ಪ್ರಧಾನಿ, ”ಭಯೋತ್ಪಾದನೆ ವಿರುದ್ಧ ದೊಡ್ಡ, ಪೂರ್ವಭಾವಿ, ವ್ಯವಸ್ಥಿತ ಪ್ರತಿಕ್ರಿಯೆಯ ಅಗತ್ಯವಿದೆ. ನಮ್ಮ ನಾಗರಿಕರು ಸುರಕ್ಷಿತವಾಗಿರಬೇಕೆಂದು ನಾವು ಬಯಸಿದರೆ, ಭಯೋತ್ಪಾದನೆ ನಮ್ಮ ಮನೆಗಳಿಗೆ ಬರುವವರೆಗೆ ನಾವು ಕಾಯಲು ಸಾಧ್ಯವಿಲ್ಲ. ನಾವು ಭಯೋತ್ಪಾದಕರನ್ನು ಹಿಂಬಾಲಿಸಬೇಕು, ಅವರ ಬೆಂಬಲ ಜಾಲಗಳನ್ನು ಮುರಿಯಬೇಕು ಮತ್ತು ಅವರ ಹಣಕಾಸನ್ನು ನಿಗ್ರಹಿಸಬೇಕು” ಎಂದಿದ್ದಾರೆ.
ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ನಲ್ಲಿ ಸಮ್ಮೇಳನ ನಡೆಯುತ್ತಿದೆ. ಎರಡು ದಿನಗಳ ಸಮ್ಮೇಳನದಲ್ಲಿ 70 ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಸಚಿವರು, ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್) ನಿಯೋಗಗಳ ಮುಖ್ಯಸ್ಥರು ಸೇರಿದಂತೆ ಪ್ರಪಂಚದಾದ್ಯಂತದ ಸುಮಾರು 450 ಪ್ರತಿನಿಧಿಗಳು ಒದರಲ್ಲಿ ಭಾಗವಹಿಸಿದ್ದಾರೆ.
Delhi | Prime Minister Narendra Modi at the 3rd Ministerial Conference on Countering Financing of Terrorism.
He will address the conference shortly. pic.twitter.com/JeqdqEL2r9
— ANI (@ANI) November 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.