ಹುಬ್ಬಳ್ಳಿ: ಸ್ವಚ್ಛ ಭಾರತ ಅಭಿಯಾನದ ಮೂಲಕ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲು ನಿರಂತರ ಪ್ರಯತ್ನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ಆದರೂ ಕೆಲವರಿಗೆ ಸ್ವಚ್ಛತೆಯ ಪಾಠ ಇನ್ನೂ ಅರ್ಥವಾಗಿಲ್ಲ. ರಸ್ತೆ ಬದಿಯಲ್ಲಿ ಕಸ ಹಾಕಿ ಬೇಜವಾಬ್ದಾರಿ ಮೆರೆಯುವ ಜನರ ಸಂಖ್ಯೆಯೂ ಕಡಿಮೆಯಾಗಿಲ್ಲ.
ಇದೇ ರೀತಿ ರಸ್ತೆ ಬದಿಗೆ ಕಸ ಹಾಕಿದ ಪಾನ್ ಅಂಗಡಿಯ ಮಾಲೀಕನಿಂದಲೇ ಕಸ ಹೆಕ್ಕಿಸುವ ಮೂಲಕ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹತ್ವದ ಸಂದೇಶವನ್ನು ರವಾನಿಸಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 47ರ ವ್ಯಾಪ್ತಿಯಲ್ಲಿರುವ ಪಾನ್ ಅಂಗಡಿಯವರು ರಸ್ತೆ ಬದಿಯಲ್ಲಿ ಕಸ ಹಾಕಿದ್ದರು. ಈ ಬಗ್ಗೆ ತಿಳಿದುಕೊಂಡ ಪಾಲಿಕೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕನಿಂದಲೇ ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಿದರು. ಅಷ್ಟೇ ಅಲ್ಲದೆ ಇದನ್ನು ಟ್ವಿಟರ್ ಮೂಲಕ ಹಂಚಿಕೊಂಡು ಎಲ್ಲರಿಗೂ ಎಚ್ಚರಿಕೆ ರವಾನಿಸಿದ್ದಾರೆ.
ಜನರಿಗೆ ವೈಜ್ಞಾನಿಕವಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಮಹಾನಗರ ಪಾಲಿಕೆಯು ಸದಾ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಲೇ ಬರುತ್ತಿದೆ. ಆದರೂ ಕೆಲವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಹೀಗಾಗಿ ಕಠಿಣ ಧೋರಣೆಯ ತಳೆಯುವ ಮೂಲಕವೇ ಪಾಠ ಕಲಿಸುವ ಪ್ರಯತ್ನವನ್ನು ಮಾಡಲಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾಡ೯ ನಂ: 47ರ ವ್ಯಾಫ್ತಿಯ ಪಾನ್-ಶಾಪ್ ಅಂಗಡಿ ದವರು ರಸ್ತೆಬದಿಯಲ್ಲಿ ಕಸ ಚೆಲ್ಲಿದ್ದರಿಂದ ಕಸವನ್ನು ಅಂಗಡಿ ಮಾಲಕರಿಂದಲೇ ತೆಗೆಸಲಾಯಿತು ಹಾಗೂ ಮತ್ತೆ ಕಸ ಎಸೆಯದಂತೆ ಎಚ್ಚರಿಕೆ ನೀಡಿಲಾಯಿತು. pic.twitter.com/ox7hWTADBI
— Hubballi-Dharwad Municipal Corporation (@HdmcHubliDwd) November 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.