ಬೆಂಗಳೂರು: ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯೆಗಳನ್ನು ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಕಿಡಕಾರಿದೆ.
ರಾಹುಲ್ ವಿರುದ್ಧ ಸರಣಿ ಟ್ವಿಟ್ ಮಾಡಿರುವ ಬಿಜೆಪಿ ಕರ್ನಾಟಕ, “ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ ರಾಹುಲ್ ಗಾಂಧಿ ಅವರು ವೀರ ಸಾವರ್ಕರ್ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ. ಕಠಿಣ ಶಿಕ್ಷೆಯನ್ನು ಎದುರಿಸಿದ ಸಾವರ್ಕರ್ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್ ಗಾಂಧಿ ಏನು?” ಎಂದು ಪ್ರಶ್ನಿಸಿದೆ.
“ಸಾವರ್ಕರ್ ಅಂಡಮಾನ್ ಜೈಲಲ್ಲಿ 50 ವರ್ಷಗಳ ಜೀವಾವಧಿ ಶಿಕ್ಷೆ ಅನುಭವಿಸಿದರು, ಹೆಗಲಲ್ಲಿ ಗಾಣ ನೀಡಲಾಗಿತ್ತು, ಏಕಾಂತ ವಾಸ, ಕಳಪೆ ಆಹಾರ ಪೂರೈಕೆಯಾಗುತ್ತಿದ್ದು. ನೆಹರೂ ಪಂಜಾಬಿನ ನಭಾ ಜೈಲಿನಲ್ಲಿ ಕೇವಲ 2 ವರ್ಷ ಶಿಕ್ಷೆ ಅನುಭವಿಸಿದರು. ಜೈಲಿನೊಳಗೆ ಸಕಲ ವ್ಯವಸ್ಥೆ ಇತ್ತು. 2 ವರ್ಷದ ಶಿಕ್ಷೆ ಕ್ಷಮಾಪಣಾ ಪತ್ರದ ಮೂಲಕ ಕೆಲವೇ ದಿನಗಳಲ್ಲಿ ಅಂತ್ಯವಾಯಿತು. ನೆಹರೂ ಪರಾಕ್ರಮಿಯೇ?” ಎಂದಿದೆ
“ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಗಾಂಧೀ ಮೌನವೇಕೆ? ಕೇವಲ ಎರಡು ವರ್ಷದ ಶಿಕ್ಷೆಯನ್ನೇ ತಡೆದುಕೊಳ್ಳಲಾರದ ಕುಟುಂಬದವರು ಸ್ವಾತಂತ್ರ್ಯದ ಹೆಗ್ಗುರುತು, ಕಠಿಣಾತಿಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್ ಅವರ ವೀರತ್ವದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ” ಎಂದಿದೆ.
ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ @RahulGandhi ಅವರು ವೀರ ಸಾವರ್ಕರ್ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ.
ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಆಗಾಗ್ಗೆ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್ ಗಾಂಧಿ ಏನು?#VeerSavarkar pic.twitter.com/T38TTChlW3
— BJP Karnataka (@BJP4Karnataka) November 18, 2022
ಸಾವರ್ಕರ್ – ಅಂಡಮಾನ್ ಜೈಲು, 50 ವರ್ಷ ಜೀವಾವಧಿ ಶಿಕ್ಷೆ, ಹೆಗಲಲ್ಲಿ ಗಾಣ, ಏಕಾಂತ ವಾಸ, ಕಳಪೆ ಆಹಾರ ಪೂರೈಕೆ.
ನೆಹರೂ – ಪಂಜಾಬಿನ ನಭಾ ಜೈಲಿನಲ್ಲಿ ಕೇವಲ 2 ವರ್ಷ ಶಿಕ್ಷೆ. ಜೈಲಿನೊಳಗೆ ಸಕಲ ವ್ಯವಸ್ಥೆ. 2 ವರ್ಷದ ಶಿಕ್ಷೆ ಕ್ಷಮಾಪಣಾ ಪತ್ರದ ಮೂಲಕ ಕೆಲವೇ ದಿನದಲ್ಲಿ ಅಂತ್ಯ.
ನೆಹರೂ ಪರಾಕ್ರಮಿಯೇ?#VeerSavarkar
— BJP Karnataka (@BJP4Karnataka) November 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.