ಮುಂಬೈ: ವೀರ ಸಾವರ್ಕರ್ ಅವರ ವಿರುದ್ಧ ರಾಹುಲ್ ಗಾಂಧಿಯವರು ನೀಡುತ್ತಿರುವ ಹೇಳಿಕೆಗಳು ಕಾಂಗ್ರೆಸ್ ಮೈತ್ರಿ ಶಿವಸೇನೆಗೆ ಇರಿಸುಮುರಿಸು ತಂದಿದೆ.
ಸದ್ಯ ಜಾಮೀನಿನ ಮೇಲೆ ಹೊರಗಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿ, ರಾಹುಲ್ ಗಾಂಧಿ ವಿಡಿ ಸಾವರ್ಕರ್ ಅವರನ್ನು ಅವಮಾನಿಸಬಾರದಿತ್ತು ಎಂದಿದ್ದಾರೆ.
“ಮಹಾರಾಷ್ಟ್ರಕ್ಕೆ ಬಂದು ಸಾವರ್ಕರ್ ಅವರನ್ನು ಅವಮಾನಿಸುವುದು ಮಹಾರಾಷ್ಟ್ರದವರಿಗಾಗಲಿ ಅಥವಾ ಶಿವಸೇನೆಗಾಗಲಿ ಸ್ವೀಕಾರಾರ್ಹವಲ್ಲ. ನೀವು ಭಾರತ ಜೋಡೋ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೀರಿ. ವೀರ್ ಸಾವರ್ಕರ್ ಅವರನ್ನು ಏಕೆ ಟೀಕಿಸುತ್ತೀರಿ? ಇದು ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು ಉಂಟುಮಾಡಬಹುದು” ಎಂದು ರಾವತ್ ರಾಹುಲ್ ಅವರನ್ನು ಎಚ್ಚರಿಸಿದ್ದಾರೆ.
ಮಹಾರಾಷ್ಟ್ರದವರು ಸಾವರ್ಕರ್ ಅವರನ್ನು ಪೂಜಿಸುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಸಾವರ್ಕರ್ಗೆ ಇನ್ನೂ ಏಕೆ ಭಾರತ ರತ್ನ ನೀಡಿಲ್ಲ? ಸಾವರ್ಕರ್ ಅವರ ಮೇಲಿನ ಅಭಿಮಾನ ಕೇವಲ ತೋರ್ಪಡಿಕೆಯೇ’ ಎಂದು ಪ್ರಶ್ನಿಸಿದರು.
ಇನ್ನೊಂದೆಡೆ ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ
ರಾಹುಲ್ ತಮ್ಮ ಹೇಳಿಕೆಯಿಂದ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ನಿನ್ನೆ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.