ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿಯ ನೇತೃತ್ವದಲ್ಲಿ ಇಂದು ಮಂಗಳೂರಿನ ಸಂಘ ನಿಕೇತನದಲ್ಲಿ ಎರಡು ದಿನಗಳ ಕನ್ನಡ ಶಾಲಾ ಮಕ್ಕಳ ಹಬ್ಬಕ್ಕೆ ಚಾಲನೆ ದೊರೆತಿದೆ.
ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಗೋಕರ್ಣನಾಥೇಶ್ವರ ಕಾಲೇಜು ಬಳಿಯಿಂದ ಜಾಥ ನಡೆದಿದ್ದು, ಚಂಡೆ, ವಾದ್ಯ ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆದಿದೆ.
ಈ ಸಾಹಿತ್ಯ ಹಬ್ಬದಲ್ಲಿ 15 ಸಾವಿರಕ್ಕೂ ಅಧಿಕ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ. ಮಕ್ಕಳಲ್ಲಿ ಸ್ವಾಭಿಮಾನ ಮೂಡಿಸುವುದು, ಅವರಲ್ಲಿ ಆತ್ಮಸ್ಥೈರ್ಯ ತುಂಬುವುದು ಈ ಹಬ್ಬದ ಮುಖ್ಯ ಉದ್ದೇಶವಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊಫೆಸರ್ ಪಿ.ಎಲ್ ಧರ್ಮ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಮುಂತಾದವರು ಭಾಗಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.