ಬೆಂಗಳೂರು: “ವಿಶ್ವ ಮೀನುಗಾರಿಕಾ ದಿನ” ಅಂಗವಾಗಿ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ಕರ್ನಾಟಕ ರಾಜ್ಯವನ್ನು ದೇಶದ “ಅತ್ಯುತ್ತಮ ಕರಾವಳಿ ರಾಜ್ಯ” ವಿಭಾಗದಡಿ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯನ್ನು ಇಂದು ಪ್ರದಾನಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶ ದಮನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸಲ್ಮಾ ಫಹೀಮ್ ರವರು ಹಾಗೂ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ರಾಮಾಚಾರ್ಯ ರವರು ರಾಜ್ಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
“ವಿಶ್ವ ಮೀನುಗಾರಿಕಾ ದಿನ” ಅಂಗವಾಗಿ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ಕರ್ನಾಟಕ ರಾಜ್ಯವನ್ನು ದೇಶದ “ಅತ್ಯುತ್ತಮ ಕರಾವಳಿ ರಾಜ್ಯ” ವಿಭಾಗದಡಿ ಪ್ರಶಸ್ತಿಗಾಗಿ ಆಯ್ಕೆ ಮಾಡಿರುತ್ತದೆ. ಈ ಪ್ರಶಸ್ತಿಯನ್ನು ದಿನಾಂಕ 21/11/2022 ರಂದು ಕೇಂದ್ರಾಡಳಿತ ಪ್ರದೇಶ ದಮನ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ. pic.twitter.com/hDiWoOIl8M
— DIPR Karnataka (@KarnatakaVarthe) November 21, 2022
ರಾಜ್ಯದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಫಹೀಮ್ ರವರು ಹಾಗೂ ಮಾನ್ಯ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಶ್ರೀ ರಾಮಾಚಾರ್ಯ ರವರು ರಾಜ್ಯದ ಪರವಾಗಿ ಸ್ವೀಕರಿಸಿದರು.
— DIPR Karnataka (@KarnatakaVarthe) November 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.