ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ತಮ್ಮ ಎರಡು ದಿನಗಳ ಕತಾರ್ ಭೇಟಿಯನ್ನು ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಅವರು FIFA ವಿಶ್ವ ಕಪ್ 2022 ರ ಉದ್ಘಾಟನಾ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದರು.
ಕತಾರ್ ಪ್ರವಾಸದ ವೇಳೆ ಅವರು ಹಲವು ವಿಶ್ವ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಸ್ವಾಗತ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನವನ್ನು ಶ್ಲಾಘಿಸಿದರು. ಮೋದಿ ಸರ್ಕಾರ ಕೊರೋನಾ ಸಂಕಷ್ಟದ ವೇಳೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಆಹಾರ ಧಾನ್ಯಗಳನ್ನು ಖಾತ್ರಿಪಡಿಸಿತು. 2050 ರ ವೇಳೆಗೆ ಭಾರತವು ಎರಡನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯಾಗಲಿದೆ ಎಂದು ಹೇಳಿದರು.
ಉಪ ರಾಷ್ಟ್ರಪತಿಗಳು ಭಾರತ-ಕತಾರ್ ಸಂಪರ್ಕಗಳನ್ನು ಗಾಢಗೊಳಿಸುವಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಶ್ಲಾಘಿಸಿದರು. ಸಮಾಜ ಬಾಂಧವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಭಾರತ ಮತ್ತು ಕತಾರ್ ವ್ಯಾಪಾರ, ಭದ್ರತೆ, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣದ ಕ್ಷೇತ್ರಗಳಿಗೆ ವಿಸ್ತರಿಸುವ ಬಹುಮುಖಿ ಪಾಲುದಾರಿಕೆಗಳೊಂದಿಗೆ ನಿಕಟ ಮತ್ತು ಸ್ನೇಹ ಸಂಬಂಧವನ್ನು ಹೊಂದಿವೆ. ಮುಂದಿನ ವರ್ಷ, ಎರಡೂ ದೇಶಗಳು ಪೂರ್ಣ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ವರ್ಷಗಳನ್ನು ಆಚರಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.