ಮಂಗಳೂರು: ಮಂಗಳೂರು ಸ್ಫೋಟ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದು, ಇಂದು ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಆಗಮಿಸಿದರು. ರಾಜ್ಯ ಗೃಹ ಸಚಿವರೊಂದಿಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಕೂಡ ಸ್ಫೋಟದ ಸ್ಥಳದಲ್ಲಿ ಹಾಜರಿದ್ದರು.
ಸ್ಥಳದಲ್ಲಿ ಆರಗ ಜ್ಞಾನೇಂದ್ರ ಅವರು ಮಂಗಳೂರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಗೃಹ ಸಚಿವರಿಗೆ ವಿವರಣೆ ನೀಡಿದ್ದು, ಸ್ಫೋಟ ಹೇಗೆ ಸಂಭವಿಸಿತು ಮತ್ತು ಮುಂದಿನ ಕ್ರಮಗಳನ್ನು ವಿವರಿಸಿದರು. ಸ್ಫೋಟ ಸಂಭವಿಸಿದ ಆಟೋ ರಿಕ್ಷಾ ಕೂಡ ಅಲ್ಲೇ ಇತ್ತು.
ಸ್ಪೋಟದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಆರೋಪಿ ಶಾರೀಕ್ ಮತ್ತು ರಿಕ್ಷಾ ಚಾಲಕ ಪುರುಷೋತ್ತಮ ಅವರನ್ನೂ ಗೃಹ ಸಚಿವರು ಭೇಟಿಯಾಗಿದ್ದಾರೆ.
ಭಯೋತ್ಪದನಾ ಕೃತ್ಯದ ಬಗ್ಗೆ ಅವರು ಇಂದು ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
#BREAKING | Karnataka DGP and Home Minister at the Mangalaru blast site as investigation intensifies in the case. Tune in #LIVE: https://t.co/GAtGCw2GdU pic.twitter.com/myAX0trDha
— Republic (@republic) November 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.