ಶ್ರೀನಗರ: ಕೆಲವು ಪತ್ರಕರ್ತರಿಗೆ ಆನ್ಲೈನ್ನಲ್ಲಿ ಭಯೋತ್ಪಾದಕ ಸಂಘಟನೆಗಳಿಂದ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಗುರುವಾರ ಜಮ್ಮು ಮತ್ತು ಕಾಶ್ಮೀರದ ಮೂರು ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.
ಆನ್ಲೈನ್ ಮೂಲಕ ಪತ್ರಕರ್ತರಿಗೆ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರ, ಬದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದೇ ಪ್ರಕರಣದಲ್ಲಿ ಕೆಲವು ದಿನಗಳ ಹಿಂದೆ ಇದೇ ರೀತಿಯ ಹುಡುಕಾಟ ನಡೆಸಿದ ಸಂದರ್ಭದಲ್ಲಿ ದೊರೆತ ಸುಳಿವುಗಳನ್ನು ಅನುಸರಿಸಿ ಮತ್ತಷ್ಟು ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕ ಸಂಘಟನೆಗಳು ಬಳಸುವ ಆನ್ಲೈನ್ ಪೇಜ್ ‘ಕಾಶ್ಮೀರ್ ಫೈಟ್’ ಪತ್ರಕರ್ತರ ಹಿಟ್ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ. ಈ ಪತ್ರಕರ್ತರು ಭದ್ರತಾ ಮತ್ತು ಗುಪ್ತಚರ ಏಜೆನ್ಸಿಗಳ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಭಯೋತ್ಪಾದಕರು ಆರೋಪಿಸಿದ್ದಾರೆ.
ಬೆದರಿಕೆಗಳು ಬಂದ ಬಳಿಕ ಕನಿಷ್ಠ ಐವರು ಸ್ಥಳೀಯ ಪತ್ರಕರ್ತರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.