ನವದೆಹಲಿ: ಕೋವಿಡ್, ಹವಾಮಾನ ಬದಲಾವಣೆ ಮತ್ತು ಘರ್ಷಣೆಗಳ ಹಿನ್ನೆಲೆಯಲ್ಲಿ ಇಂದು ವಿಶ್ವದಲ್ಲಿ ಸಿರಿಧಾನ್ಯ ಹೆಚ್ಚು ಪ್ರಸ್ತುತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಹೇಳಿದ್ದಾರೆ.
ಅವರು ನವದೆಹಲಿಯಲ್ಲಿ ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ 2023’ ರ ಭಾರತದ ಒಂದು ವರ್ಷದ ಮಹಾ ಸಂಭ್ರಮಾಚರಣೆಯ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿ, “ಆಹಾರ ಭದ್ರತೆ ಮತ್ತು ಅಂತರಾಷ್ಟ್ರೀಯ ಸಂಬಂಧಗಳಿಗೆ ಸಿರಿಧಾನ್ಯ ಮಹತ್ವದ್ದಾಗಿದೆ” ಎಂದು ಒತ್ತಿ ಹೇಳಿದರು
ಸಾಂಕ್ರಾಮಿಕ ರೋಗವು ಆಹಾರ ಭದ್ರತೆಗೆ ಏನು ಮಾಡಬಹುದೆಂದು ಜಗತ್ತಿಗೆ ಅರಿವಾಗಿದೆ. ಹವಾಮಾನ ಬದಲಾವಣೆಗಳು ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ವ್ಯಾಪಾರವನ್ನು ಅಡ್ಡಿಪಡಿಸುತ್ತದೆ. ಅಂತರರಾಷ್ಟ್ರೀಯ ಸಂಬಂಧಗಳಲ್ಲಿ, ಆಹಾರ ಭದ್ರತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಾತನಾಡಿ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವು ಆಹಾರ ಭದ್ರತೆ ಮತ್ತು ಪೋಷಣೆಯಲ್ಲಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತದೆ. ಭಾರತವು ಸಿರಿಧಾನ್ಯ ಉತ್ಪಾದಿಸುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಸಿರಿಧಾನ್ಯ ಹವಾಮಾನ ಸ್ನೇಹಿ ಬೆಳೆಯಾಗಿದ್ದು, ಬರಪೀಡಿತ ಪ್ರದೇಶಗಳಲ್ಲಿಯೂ ಬೆಳೆಯಬಹುದು. ಇವುಗಳ ಬಳಕೆ ಮತ್ತು ಉತ್ಪಾದನೆಯನ್ನು ಹೆಚ್ಚಿಸಲು ತಮ್ಮ ಸಚಿವಾಲಯವು ಮಿಷನ್ ಮೋಡ್ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
60ಕ್ಕೂ ಹೆಚ್ಚು ದೇಶಗಳ ಭಾರತದ ಹೈಕಮಿಷನರ್ಗಳು ಮತ್ತು ರಾಯಭಾರಿಗಳು ಪೂರ್ವಭಾವಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಪ್ರಮುಖ ಉದ್ದೇಶವೆಂದರೆ ಭಾರತೀಯ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ರ ಯಶಸ್ವಿ ಜಾಗತಿಕ ಆಚರಣೆಗಾಗಿ ಇತರ ರಾಷ್ಟ್ರಗಳೊಂದಿಗೆ ತೊಡಗಿಸಿಕೊಳ್ಳುವುದು.
ಅಕ್ಕಿ ಮತ್ತು ಗೋಧಿಯಂತಹ ಉತ್ತಮವಾದ ಧಾನ್ಯಗಳಿಗೆ ಹೋಲಿಸಿದರೆ, ಸಿರಿಧಾನ್ಯಗಳು ಗಣನೀಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ಫೈಬರ್ ಮತ್ತು ಖನಿಜಗಳನ್ನು ಹೊಂದಿರುತ್ತವೆ. ಇವುಗಳು ಗ್ಲುಟನ್-ಮುಕ್ತ ಮತ್ತು ಅಲರ್ಜಿಯಲ್ಲದ ಕಾರಣ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಸಿರಿಧಾನ್ಯ ರಕ್ತಹೀನತೆ, ಯಕೃತ್ತಿನ ಅಸ್ವಸ್ಥತೆಗಳು ಮತ್ತು ಅಸ್ತಮಾವನ್ನು ಕಡಿಮೆ ಮಾಡುತ್ತದೆ. ಇದರ ಆಹಾರದ ಫೈಬರ್ ಹಸಿವನ್ನು ತಣಿಸುತ್ತದೆ ಮತ್ತು ಬೊಜ್ಜು ಮತ್ತು ಟೈಪ್ II ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು 131 ದೇಶಗಳಲ್ಲಿ ಬೆಳೆಯಲಾಗುತ್ತದೆ ಮತ್ತು ಏಷ್ಯಾ ಮತ್ತು ಆಫ್ರಿಕಾದ 59 ಕೋಟಿ ಜನರಿಗೆ ಇದು ಸಾಂಪ್ರದಾಯಿಕ ಆಹಾರವಾಗಿದೆ. ಸಿರಿಧಾನ್ಯ ಪ್ರಪಂಚದಲ್ಲಿ ಸೂಪರ್ಫುಡ್ ಆಗಿ ಜನಪ್ರಿಯತೆಯನ್ನು ಗಳಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.